ಹಾಲಿನ ಡೇರಿಯಲ್ಲಿ ಲಕ್ಷಾಂತರ ರೂ. ಅವ್ಯವಹಾರ: ಅಧ್ಯಕ್ಷರ ಮನೆ ಮುಂದೆಯೇ ಹಾಲು ಸುರಿದು ಪ್ರತಿಭಟಿಸಿದ ಮಂಡ್ಯ ಗ್ರಾಮಸ್ಥರು
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಐಕನಹಳ್ಳಿಕೊಪ್ಪಲು ಗ್ರಾಮದ ಹಾಲಿನ ಡೇರಿಯಲ್ಲಿ ಲಕ್ಷಾಂತರ ರೂಪಾಯಿಗಳ ಹಗರಣ ನಡೆದಿದ್ದು, ಗ್ರಾಮಸ್ಥರು ಡೇರಿ ಅಧ್ಯಕ್ಷ, ಕಾರ್ಯದರ್ಶಿ ಮನೆ ಮುಂದೆ ಹಾಲು ಸುರಿದು ಪ್ರತಿಭಟಿಸಿದ್ದಾರೆ. ಡೇರಿಯ ಅಧ್ಯಕ್ಷ ಮತ್ತು ಕಾರ್ಯದರ್ಶಿಯೇ ಈ ಹಗರನವನ್ನೆಸಗಿದ್ದಾರೆ ಎಂಬ ಆರೋಪದ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿರುವ ಗ್ರಾಮಸ್ಥರು, ಈ ರೀತಿ ಪ್ರತಿಭಟನೆಗಿಳಿದಿದ್ದಾರೆ. ಈ ಕುರಿತು ತನಿಖೆಯಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಂಡ್ಯ, ಅಕ್ಟೋಬರ್ 7: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಐಕನಹಳ್ಳಿಕೊಪ್ಪಲು ಗ್ರಾಮದ ಹಾಲಿನ ಡೇರಿಯಲ್ಲಿ ಲಕ್ಷಾಂತರ ರೂಪಾಯಿಗಳ ಹಗರಣ ನಡೆದಿದ್ದು, ಗ್ರಾಮಸ್ಥರು ಡೇರಿ ಅಧ್ಯಕ್ಷ, ಕಾರ್ಯದರ್ಶಿ ಮನೆ ಮುಂದೆ ಹಾಲು ಸುರಿದು ಪ್ರತಿಭಟಿಸಿದ್ದಾರೆ. ಡೇರಿಯ ಅಧ್ಯಕ್ಷ ಮತ್ತು ಕಾರ್ಯದರ್ಶಿಯೇ ಈ ಹಗರಣವನ್ನೆಸಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿತ್ತು. ಹೀಗಾಗಿ ಕಳೆದ 5 ದಿನಗಳಿಂದ ಅವರಿಬ್ಬರೂ ಡೇರಿಗೆ ಹೊಗಿರಲೇ ಇಲ್ಲ. ಈ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿರುವ ಗ್ರಾಮಸ್ಥರು, ಈ ರೀತಿ ಪ್ರತಿಭಟನೆಗಿಳಿದಿದ್ದಾರೆ. ಈ ಕುರಿತು ತನಿಖೆಯಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

