Karnataka Assembly Polls; ಸೋಲುವ ಭೀತಿಯಲ್ಲಿರುವ ಸಿಟಿ ರವಿ ಕ್ಷೇತ್ರದಲ್ಲಿ ಹಣ ಮತ್ತು ಹೆಂಡದ ಹೊಳೆ ಹರಿಸುತ್ತಿದ್ದಾರೆ: ಹೆಚ್ ಡಿ ತಮ್ಮಯ್ಯ, ಕಾಂಗ್ರೆಸ್ ನಾಯಕ

|

Updated on: Apr 10, 2023 | 6:39 PM

ರವಿಯವರಿಗೆ ನ್ಯಾಯಯುತವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಸಾಧ್ಯವಿಲ್ಲ. ಅವರು ಲಿಂಗಾಯತ, ಕುರುಬ ಸಮುದಾಯಗಳ ವೈರತ್ವ ಕಟ್ಟಿಕೊಂಡಿದ್ದಾರೆ ಎಂದು ತಮ್ಮಯ್ಯ ಹೇಳಿದರು.

ಚಿಕ್ಕಮಗಳೂರು: ಕಾಂಗ್ರೆಸ್ ಧುರೀಣ ಹೆಚ್ ಡಿ ತಮ್ಮಯ್ಯ (HD Tammaiah) ಹಿಂದೊಮ್ಮೆ ಬಿಜೆಪಿ ಶಾಸಕ ಸಿಟಿ ರವಿಯವರ (CT Ravi) ಅಪ್ತವಲ್ಲಯದಲ್ಲಿ ಗುರುತಿಸಿಕೊಂಡವರು. ಆದರೆ ತಮ್ಮಯ್ಯ ಈಗ ಕಾಂಗ್ರೆಸ್ ನಲ್ಲಿದ್ದಾರೆ ಮತ್ತು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಅಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ತಮ್ಮಯ್ಯ, ರವಿಯವರಿಗೆ ಸೋಲಿನ ಭೀತಿ ಹುಟ್ಟಿಕೊಂಡಿದೆ, ಹಾಗಾಗೇ, ಮತದಾರರಿಗೆ ಹಣ, ಸೀರೆ ಮತ್ತು ಮದ್ಯವನ್ನು ಹಂಚುತ್ತಿದ್ದಾರೆ ಎಂದು ಹೇಳಿದರು. ರವಿಯವರಿಗೆ ನ್ಯಾಯಯುತವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಸಾಧ್ಯವಿಲ್ಲ. ಅವರು ಲಿಂಗಾಯತ, ಕುರುಬ ಸಮುದಾಯಗಳ ವಿರುದ್ಧ ಮತ್ತು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಹೆಚ್ ಡಿ ದೇವೇಗೌಡರ (HD Devegowda) ವಿರುದ್ಧ ಸಲ್ಲದ ಕಾಮೆಂಟ್ ಗಳನ್ನು ಮಾಡಿ ಎಲ್ಲರ ಅಸಮಾಧಾನಕ್ಕೆ ಗುರಿಯಾಗಿದ್ದಾರೆ ಎಂದು ತಮ್ಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Mon, 10 April 23

Follow us on