My India My Life Goals: ಅವಿದ್ಯಾಂತನಾದರೂ ಒಡಿಶಾದ ಬೀಚಿಭಾಯ್ ಲಕ್ಷಾಂತರ ಆಮೆಗಳನ್ನು ಸಂರಕ್ಷಿಸುತ್ತಾ ವಿದ್ಯಾವಂತರಿಗೆ ಪ್ರೇರಣೆಯಾಗಿದ್ದಾರೆ!

ಆಮೆಗಳಾಗಲೀ ಅಥವಾ ಮರಗಳಾಗಲೀ ಪ್ರತಿಯೊಬ್ಬ ಭಾರತೀಯ ಅವುಗಳನ್ನು ಸಂರಕ್ಷಿಸಿ, ಕಾಪಾಡಿ ಮತ್ತು ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ಉಡುಗೊರೆಯಾಗಿ ನೀಡಬೇಕು ಎಂದು ಅವರು ಹೇಳುತ್ತಾರೆ.

My India My Life Goals: ಅವಿದ್ಯಾಂತನಾದರೂ ಒಡಿಶಾದ ಬೀಚಿಭಾಯ್ ಲಕ್ಷಾಂತರ ಆಮೆಗಳನ್ನು ಸಂರಕ್ಷಿಸುತ್ತಾ ವಿದ್ಯಾವಂತರಿಗೆ ಪ್ರೇರಣೆಯಾಗಿದ್ದಾರೆ!
|

Updated on: Jul 25, 2023 | 12:17 PM

ಬೆಂಗಳೂರು: ಹಾಗೆ ನೋಡಿದರೆ ಒಡಿಶಾದ ಗುಂಡಾಬಾಲ್ ನಿವಾಸಿಯಾಗಿರುವ ಇವರ ಹೆಸರು ಬಿಚಿತ್ರಾನಂದ್ ಬಿಸ್ವಾಲ್ (Bichitrananda Biswal). ಆದರೆ ಅವರು ಗುರುತಿಸಿಕೊಳ್ಳೋದು, ಜನಪ್ರಿಯತೆ ಮತ್ತು ಖ್ಯಾತಿ ಗಳಿಸಿರೋದು ಬೀಚಿ ಭಾಯ್ (Bichi Bhai) ಅಂತ! ಹೌದು, ವನ್ಯಜೀವಿ ಸಂರಕ್ಷಣೆಗೆ (wildlife conservation) ಒಡಿಶಾ ಸರ್ಕಾರದ ಬಿಜು ಪಟ್ನಾಯಕ್ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ಬೀಚಿ ಭಾಯ್ ಕಳೆದ 27 ವರ್ಷಗಳಿಂದ ಸಮುದ್ರ ತೀರಕ್ಕೆ ಮೊಟ್ಟೆಯಿಡಲು ಬರುವ ಸಮಯದಲ್ಲಿ ಸಾವಿಗೀಡಾಗುತ್ತಿದ್ದ ಆಮೆಗಳನ್ನು (turtles) ಸಂರಕ್ಷಿಸುತ್ತಿದ್ದಾರೆ. ಹೆಚ್ಚು ಓದಿರದ ಬೀಚಿ ಭಾಯ್ 1996 ರಲ್ಲಿ ಬೀಚ್ ಗೆ ವಾಕ್ ಗೆಂದು ಬಂದಾಗ ತೀರದಲ್ಲಿ ಸಾವಿರಾರು ಆಮೆಗಳು ಸತ್ತು ಬಿದ್ದಿರುವುದನ್ನು ಕಂಡು ಗರಬಡಿದವರಂತಾಗಿದ್ದರು. ಅದೇ ದಿನ ಅವರು ಅವುಗಳನ್ನು ಸಂರಕ್ಷಿಸುವ ಪಣತೊಟ್ಟು ಅ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದರು. ತಮ್ಮೊಂದಿಗೆ ಸಮಾನ ಮನಸ್ಕ ಯುವಕರನ್ನು ಜೊತೆಗೂಡಿಸಿಕೊಂಡು ಮೊಟ್ಟೆಯಿಡಲು ತೀರಕ್ಕೆ ಬರುವ ಆಮೆಗಳಿಗೆ ಸೂಕ್ತ ಜಾಗ ಕಲ್ಪಸಿ, ಮೊಟ್ಟೆಗಳನ್ನು ಅವರು ಸಂರಕ್ಷಿಸುತ್ತಿದ್ದಾರೆ. ಮೊಟ್ಟೆಯಿಂದ ಮರಿಗಳು ಹೊರಬಂದ ಬಳಿಕ ಅವುಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಬಿಡುವ ಕೆಲಸ ಅವರು ಎರಡೂವರೆ ದಶಕಗಳಿಂದ ಮಾಡುತ್ತಿದ್ದಾರೆ. ಆಮೆಗಳ ಸಂರಕ್ಷಣೆಗೆ ಬೀಚಿ ಭಾಯ್ ಮದುವೆ ಕೂಡ ಆಗದೆ ತಮ್ಮಿಡೀ ಬದುಕನ್ನು ಮುಡುಪಾಗಿಟ್ಟಿದ್ದಾರೆ. ಪ್ರತಿಯೊಬ್ಬ ಭಾರತೀಯ, ಆಮೆಗಳಾಗಲೀ ಅಥವಾ ಮರಗಳಾಗಲೀ ಸಂರಕ್ಷಿಸಿ ಕಾಪಾಡಿ ಮತ್ತು ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ಉಡುಗೊರೆಯಾಗಿ ನೀಡಬೇಕು ಎಂದು ಅವರು ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!