ಗದಗ: ತರಗತಿ ಬಹಿಷ್ಕರಿಸಿ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ; ಯಾಕೆ ಗೊತ್ತಾ?

ಶಾಲಾ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ಗದಗ(Gadag) ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಬಿಸಿಯೂಟ(Bisiyuta), ಪೌಷ್ಟಿಕ ಆಹಾರ ನೀಡದಿದ್ದಕ್ಕೆ ಶಾಲೆಗೆ ಬೀಗ ಜಡಿದ ವಿದ್ಯಾರ್ಥಿಗಳು, ಮುಖ್ಯ ಶಿಕ್ಷಕಿ ಎ.ಎಸ್ ರಾಠೋಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗ, ನ.07: ಶಾಲಾ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ಗದಗ(Gadag) ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಬಿಸಿಯೂಟ(Bisiyuta), ಪೌಷ್ಟಿಕ ಆಹಾರ ನೀಡದಿದ್ದಕ್ಕೆ ಶಾಲೆಗೆ ಬೀಗ ಜಡಿದ ವಿದ್ಯಾರ್ಥಿಗಳು, ಮುಖ್ಯ ಶಿಕ್ಷಕಿ ಎ.ಎಸ್ ರಾಠೋಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 15 ದಿನಳಿಂದ ಮೊಟ್ಟೆ, ಶೇಂಗಾ ಚಿಕ್ಕಿ ಹಾಗೂ ಬಾಳೆ ಹಣ್ಣು ಸೇರಿ ಇನ್ನಿತರ ಪೌಷ್ಟಿಕ ಆಹಾರ ನೀಡದೇ, ಧಾನ್ಯಗಳಿಲ್ಲದ ತಿಳಿ ಸಾಂಬಾರು ಹಾಗೂ ಹುಳು ಹತ್ತಿದ ಕೊಳೆತ ತರಕಾರಿಯನ್ನು ಬಳಕೆ ಮಾಡಿ ಅಸಮರ್ಪಕವಾಗಿ ಮಧ್ಯಾಹ್ನ ಬಿಸಿಯೂಟವನ್ನು  ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು 1 ರಿಂದ 7ನೇ ತರಗತಿ ವರೆಗೆ ಬರೊಬ್ಬರಿ 441 ಮಕ್ಕಳು ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹೀಗಿದ್ದರೂ ಮುಖ್ಯ ಶಿಕ್ಷಕಿ ಎ.ಎಸ್ ರಾಠೋಡ ಅವರು ಮಕ್ಕಳ ಹಿತ ಕಾಪಾಡುತ್ತಿಲ್ಲ, ನಮ್ಮೂರ ಶಾಲೆಗೆ ಇಂಥಹ ಶಿಕ್ಷಕರು ಬೇಡ ಎಂದು ಪಟ್ಟು ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 6:23 pm, Tue, 7 November 23

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us