AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕಲಾವಿದನ ಮನೆ ಮುಂದಿದ್ದ ಗಣೇಶನ ಮೂರ್ತಿ ಲಪಟಾಯಿಸಿದ ಕಳ್ಳರು!

ಮೈಸೂರು: ಕಲಾವಿದನ ಮನೆ ಮುಂದಿದ್ದ ಗಣೇಶನ ಮೂರ್ತಿ ಲಪಟಾಯಿಸಿದ ಕಳ್ಳರು!

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 02, 2024 | 1:55 PM

Share

ದೇವಸ್ಥಾನಗಳಿಂದ ವಿಗ್ರಹಗಳನ್ನು ಕಳುವು ಮಾಡುವುದನ್ನು ಕೆಲ ಕಳ್ಳರು ರೂಢಿಮಾಡಿಕೊಂಡಿರುತ್ತಾರೆ. ಆದರೆ ಈಗ ಮನೆಗಳ ಮುಂದಿನ ವಿಗ್ರಹಗಳನ್ನೂ ಕಳ್ಳರು ಬಿಡುತ್ತಿಲ್ಲ. ಎಂಥ ಕಾಲ ತಂದೋ ಶಿವನೇ ಬಂದಿತ್ತೋ ಕಲಿಗಾಲ ಅಂತ ತತ್ವಪದವನ್ನು ಕೊಂಚ ಮಾರ್ಪಡಿಸಿಕೊಂಡು ಹಾಡಿದರೆ ತಪ್ಪಿಲ್ಲವೇನೋ.....

ಮೈಸೂರು: ನಗರದ ಕುಂಬಾರಗೇರಿಯಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯವನ್ನೊಮ್ಮೆ ನೋಡಿ. ದ್ವಿಚಕ್ರವಾಹನವೊಂದರ ಮೇಲೆ ಸವಾರಾಗಿರುವ ಕಳ್ಳರು ಮನೆ ಮುಂದೆ ಇರಿಸಿದ್ದ ಗಣಪತಿ ವಿಗ್ರವಹವನ್ನು ಅನಾಮತ್ತಾಗಿ ಎತ್ತಿಕೊಂಡು ಪರಾರಿಯಾಗುತ್ತಾರೆ! ಕಳ್ಳರು ಹಿಂದೂಗಳೇ ಆಗಿದ್ದು ಮನೆಯಲ್ಲಿ ಅಥವಾ ತಮ್ಮ ಓಣಿಯಲ್ಲಿ ಕದ್ದ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಿದರೆ ದೇವರು ಮೆಚ್ಚುವನೇ? ವಿಗ್ರಹಗಳನ್ನು ತಯಾರಿಸುವ ಕಲಾವಿದ ರೇವಣ್ಣ ಅವರ ಮನೆಮುಂದಿನಿಂದ ವಿಗ್ರಹ ಕಳುವಾಗಿದ್ದು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿದ್ದರಾಮಯ್ಯ ಮೈಸೂರು ಪ್ರವಾಸದ ಸಮಯ ಬದಲಾವಣೆ: ಕಾರಣ ಮುಡಾ ಕೇಸ್..!

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More