AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಚ್ಚಿಯ ಶ್ರೀರಂಗಂ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಯವರಿಗೆ ಸಿಕ್ಕ ಸ್ವಾಗತ ಅಭೂತಪೂರ್ವ!

ರಸ್ತೆಗಳ ಇಕ್ಕೆಲಗಳಲ್ಲಿ, ಮನೆಗಳ ಮುಂದೆ, ಮನೆಗಳ ಬಾಲ್ಕನಿಯಲ್ಲಿ ಜನ ನಿಂತು ಹರ್ಷೋದ್ಗಾರಗಳ ಮೂಲಕ ಪ್ರಧಾನಿ ಮೋದಿಯವರನ್ನು ಮಂದಿರಗಳ ಪಟ್ಟಣಕ್ಕೆ ಸ್ವಾಗತಿಸಿದರು. ‘ಮೋದಿ, ಮೋದಿ’ ಅಂತ ಕೂಗುತ್ತಾ, ಕೈಗಳೆತ್ತಿ ನಮಸ್ಕರಿಸುತ್ತಿದ್ದ ಜನರನ್ನು ನೋಡಿ ಮೋದಿ ಮುಗುಳ್ನಗುತ್ತಾ ಅವರೆಡೆ ಕೈಬೀಸಿ ಅವರ ಪ್ರೀತಿ-ಅಭಿಮಾನ ಸ್ವೀಕರಿಸಿದರು.

ಅರುಣ್​ ಕುಮಾರ್​ ಬೆಳ್ಳಿ
|

Updated on:Jan 20, 2024 | 6:41 PM

Share

ಚೆನ್ನೈ: ತಮಿಳುನಾಡುನಲ್ಲಿ ಎರಡು ದಿನಗಳ ಧಾರ್ಮಿಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಇಂದು ತ್ರಿಚ್ಚಿ ಎಂದು ಕರೆಸಿಕೊಳ್ಳುವ ತಿರುಚಿರಾಪಳ್ಳಿಗೆ (Tiruchirapalli) ಬಂದಾಗ ಅವರಿಗೆ ಸಿಕ್ಕ ಸ್ವಾಗತ ನೋಡಿ ಹೇಗಿದೆ! ನಿಮಗೆ ಗೊತ್ತಿರಲಿ, ಇದು ಪೂರ್ವನಿಯೋಜಿತ ರೋಡ್ ಶೋ (road show) ಅಗಿರಲಿಲ್ಲ, ಪ್ರಧಾನಿ ಮೋದಿ ಅವರು ತಮ್ಮೂರಿಗೆ ಬಂದ ಸಂಗತಿ ಕಾಡ್ಗಿಚ್ಚಿನಂತೆ ಹಬ್ಬಿ ಮನೆಗಳಲ್ಲಿದ್ದ ಜನ ರಸ್ತೆಗಳಿಗೆ ಧಾವಿಸಿದಾಗ ರೋಡ್ ಶೋನಂಥ ಸನ್ನಿವೇಶ ಸೃಷ್ಟಿಯಾಯಿತು. ಇದು ತಿರುಚಿರಾಪಳ್ಳಿ ಜಿಲ್ಲೆಯ ಶ್ರೀರಂಗಂ. ರಸ್ತೆಗಳ ಇಕ್ಕೆಲಗಳಲ್ಲಿ, ಮನೆಗಳ ಮುಂದೆ, ಮನೆಗಳ ಬಾಲ್ಕನಿಯಲ್ಲಿ ಜನ ನಿಂತು ಹರ್ಷೋದ್ಗಾರಗಳ ಮೂಲಕ ಪ್ರಧಾನಿ ಮೋದಿಯವರನ್ನು ಮಂದಿರಗಳ ಪಟ್ಟಣಕ್ಕೆ ಸ್ವಾಗತಿಸಿದರು. ‘ಮೋದಿ, ಮೋದಿ’ ಅಂತ ಕೂಗುತ್ತಾ, ಕೈಗಳೆತ್ತಿ ನಮಸ್ಕರಿಸುತ್ತಿದ್ದ ಜನರನ್ನು ನೋಡಿ ಮೋದಿ ಮುಗುಳ್ನಗುತ್ತಾ ಅವರೆಡೆ ಕೈಬೀಸಿ ಅವರ ಪ್ರೀತಿ-ಅಭಿಮಾನ ಸ್ವೀಕರಿಸಿದರು. ಶ್ರೀರಂಗಂನಲ್ಲಿರುವ ವಿಶ್ವವಿಖ್ಯಾತ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು.

ಶ್ರೀರಂಗಂ ದೇವಸ್ಥಾನವು ಶ್ರೀ ರಂಗನಾಥರ್ ಗೆ ಸಮರ್ಪಣೆಯಾಗಿರುವ ಹಿಂದೂ ದೇವಾಲಯವಾಗಿದೆ. ಭಗವಾನ್ ವಿಷ್ಣುನನ್ನು ಆರಾಧಿಸುವ ಅತ್ಯಂತ ಪ್ರಮುಖ ದೇವಸ್ಥಾನ ಇದಾಗಿದ್ದು ವಿಶ್ವದ ಅತಿದೊಡ್ಡ ದೇವಾಲಯ ಸಂಕೀರ್ಣವೆಂಬ ಖ್ಯಾತಿಗೂ ಪಾತ್ರವಾಗಿದೆ. ಕ್ರಿ.ಶ 15ನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದ ಅರಸರು ಈ ದೇವಾಲಯ ಕಟ್ಟಿದರು ಅಂತ ಇತಿಹಾಸ ಹೇಳುತ್ತದೆ. ದೇವಸ್ಥಾನದ ಆವರಣದಲ್ಲಿ ಹಲವಾರು ವಿದ್ವಾಂಸರು ಕಂಬ ರಾಮಾಯಣದಿಂದ ಆಯ್ದ್ದ ವಚನಗಳನ್ನು ಪಠಿಸಿದ್ದನ್ನು ಪ್ರಧಾನಿ ಮೋದಿ ಶ್ರದ್ಧೆಯಿಂದ ಆಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Sat, 20 January 24

ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು