ಸಿಎಂ ಸಿದ್ದರಾಮಯ್ಯ ಮೈಸೂರು ನಿವಾಸಕ್ಕೆ ಭಾರೀ ಭದ್ರತೆ, ಸ್ಫೋಟಕ ಹಾಗೂ ಶ್ವಾನದಳದಿಂದ ಸ್ಥಳ ಪರಿಶೀಲನೆ

ಅರುಣ್​ ಕುಮಾರ್​ ಬೆಳ್ಳಿ

Updated on: Oct 16, 2023 | 1:09 PM

ಎಸಿಪಿ ಗಜೇಂದ್ರ ನೇತೃತ್ವದಲ್ಲಿ ಒಂದು ಸಿಎಅರ್, ಒಂದು ಕೆಎಸ್ ಆರ್ ಪಿ, ಸಬ್ ಇನ್ಸ್ ಪೆಕ್ಟರ್ ಹಾಗೂ ಅಸಿಸ್ಟಂಟ್ ಸಬ್ ಇನ್ಸ್ ಪೆಕ್ಟರ್ ಒಳಗೊಂಡ 100 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಲಾಗಿದೆ. ದಸರಾ ಉತ್ಸವಕ್ಕೆ ದೇಶವಿದೇಶಗಳಿಂದ ಮೈಸೂರಿಗೆ ಆಗಮಿಸುವುದರಿಂದ ಅವರೊಂದಿಗೆ ಸಮಾಜಘಾತುಕ ಶಕ್ತಿಗಳು ನಗರಕ್ಕೆ ನಗರ ಪ್ರವೇಶಿಸಬಹುದಾದ ಶಂಕೆಯಿಂದ ಸಿಎಂ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM Siddaramaiah) ಮೈಸೂರು ನಿವಾಸದ ಮೇಲೆ ಕಳೆದ ವಾರ ನಡೆದ ಕಲ್ಲೆಸೆತದ ಘಟನೆಯ ಬಳಿಕ ಮನೆಗೆ ಹೆಚ್ಚಿನ ಭದ್ರತೆ (security heightened) ಒದಗಿಲಾಗಿದೆ. ಸೋಮವಾರ ಬೆಳಗ್ಗೆ, ಬಾಂಬ್ ಸ್ಕ್ವ್ಯಾಡ್ ಮತ್ತು ಶ್ವಾನದಳ (dog squad) ಸಹ ಸಿಎಂ ನಿವಾಸದ ಆವರಣ ಮತ್ತು ವಾಹನಗಳ ಪರಿಶೀಲನೆ ನಡೆಸಿದರು. ಕಲ್ಲೆಸೆದ ವ್ಯಕ್ತಿಯನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ನಗರದ ಟಿಕೆ ಬಡಾವಣೆಯಲ್ಲಿರುವ ಸಿದ್ದರಾಮಯ್ಯ ನಿವಾಸದ ಮುಂದೆ ಪೊಲೀಸರ ದಂಡನ್ನು ನೋಡಬಹುದು. ಎಸಿಪಿ ಗಜೇಂದ್ರ ನೇತೃತ್ವದಲ್ಲಿ ಒಂದು ಸಿಎಅರ್, ಒಂದು ಕೆಎಸ್ ಆರ್ ಪಿ, ಸಬ್ ಇನ್ಸ್ ಪೆಕ್ಟರ್ ಹಾಗೂ ಅಸಿಸ್ಟಂಟ್ ಸಬ್ ಇನ್ಸ್ ಪೆಕ್ಟರ್ ಒಳಗೊಂಡ 100 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಲಾಗಿದೆ. ದಸರಾ ಉತ್ಸವಕ್ಕೆ ದೇಶವಿದೇಶಗಳಿಂದ ಮೈಸೂರಿಗೆ ಆಗಮಿಸುವುದರಿಂದ ಅವರೊಂದಿಗೆ ಸಮಾಜಘಾತುಕ ಶಕ್ತಿಗಳು ನಗರಕ್ಕೆ ನಗರ ಪ್ರವೇಶಿಸಬಹುದಾದ ಶಂಕೆಯಿಂದ ಸಿಎಂ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.