ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಮತದಾನ ಮೇ.10 ರಂದು ಅದ್ದೂರಿಯಾಗಿ ನಡೆದಿದ್ದು, ಫಲಿತಾಂಶ ಮೇ.13 ರಂದು ಹೊರ ಬಿದ್ದಿತ್ತು. ಈ ಮೂಲಕ ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತದಿಂದ ರಾಜ್ಯದಲ್ಲಿ ಗೆದ್ದುಬೀಗಿತ್ತು. ಬಳಿಕ ಕಾಂಗ್ರೆಸ್ನಲ್ಲಿ ಸಿಎಂ ಯಾರಾಗ್ತಾರೆ ಎನ್ನುವ ಪ್ರಶ್ನೆ ಮೂಡಿದ್ದು, ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ ನಡುವೆ ಪೈಪೋಟಿ ಏರ್ಪಟಿತ್ತು. ಇದೀಗ ಸಿದ್ದರಾಮಯ್ಯ ಸಿಎಂ ಆಗುವುದು ಬಹುತೇಕ ಖಚಿತ ಹಿನ್ನೆಲೆ. ಕಂಠೀರವ ಕ್ರೀಡಾಂಗಣಕ್ಕೆ (Kanteerava Stadium) ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಭದ್ರತೆ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ