ಸಿದ್ದರಾಮಯ್ಯ ಪ್ರಮಾಣವಚನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ಧತೆ ಹೇಗಿದೆ ನೋಡಿ

|

Updated on: May 17, 2023 | 1:43 PM

ವಿಧಾಸಭೆ ಚುನಾವಣಾ ಮತದಾನ ಮೇ.10 ರಂದು ಅದ್ದೂರಿಯಾಗಿ ನಡೆದಿದ್ದು, ಫಲಿತಾಂಶ ಮೇ.13 ರಂದು ಹೊರ ಬಿದ್ದಿತ್ತು. ಈ ಮೂಲಕ ಕಾಂಗ್ರೆಸ್​ ಪಕ್ಷ ಸಂಪೂರ್ಣ ಬಹುಮತದಿಂದ ರಾಜ್ಯದಲ್ಲಿ ಗೆದ್ದುಬೀಗಿತ್ತು. ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ಬಹುತೇಕ ಸಿದ್ದರಾಮಯ್ಯ ಖಚಿತವಾಗಿದ್ದು, ಈ ಹಿನ್ನಲೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಮತದಾನ ಮೇ.10 ರಂದು ಅದ್ದೂರಿಯಾಗಿ ನಡೆದಿದ್ದು, ಫಲಿತಾಂಶ ಮೇ.13 ರಂದು ಹೊರ ಬಿದ್ದಿತ್ತು. ಈ ಮೂಲಕ ಕಾಂಗ್ರೆಸ್​ ಪಕ್ಷ ಸಂಪೂರ್ಣ ಬಹುಮತದಿಂದ ರಾಜ್ಯದಲ್ಲಿ ಗೆದ್ದುಬೀಗಿತ್ತು. ಬಳಿಕ ಕಾಂಗ್ರೆಸ್​ನಲ್ಲಿ ಸಿಎಂ ಯಾರಾಗ್ತಾರೆ ಎನ್ನುವ ಪ್ರಶ್ನೆ ಮೂಡಿದ್ದು, ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ ನಡುವೆ ಪೈಪೋಟಿ ಏರ್ಪಟಿತ್ತು. ಇದೀಗ ಸಿದ್ದರಾಮಯ್ಯ ಸಿಎಂ ಆಗುವುದು ಬಹುತೇಕ ಖಚಿತ ಹಿನ್ನೆಲೆ. ಕಂಠೀರವ ಕ್ರೀಡಾಂಗಣಕ್ಕೆ (Kanteerava Stadium) ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಭದ್ರತೆ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us on