ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೀತಾ ರಾಮನ ವಿಗ್ರಹ ಮಾರಾಟ

Edited By: ವಿವೇಕ ಬಿರಾದಾರ

Updated on: Jan 17, 2024 | 10:44 AM

ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಒಳಭಾಗದ ಅಂಗಡಿಗಳಲ್ಲಿ ರಾಮನ ಮೂರ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ.

ದೇವನಹಳ್ಳಿ, ಜನವರಿ 17: ಅಯೋದ್ಯೆಯಲ್ಲಿ (Ayodhya) ರಾಮಮಂದಿರದಲ್ಲಿ ಪ್ರಭು ಶ್ರೀರಾಮಚಂದ್ರನ (Sri Ram) ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದೆ. ಇಂದು ರಾಮಮಂದಿರ ದೇವಸ್ಥಾನದ ಆವರಣದೊಳಗೆ ಮೂರ್ತಿ ಪ್ರವೇಶಿಸುತ್ತದೆ. ನಾಳೆ (ಜ.18) ಗರ್ಭಗುಡಿಯಲ್ಲಿ ಶ್ರೀರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಅಲ್ಲಿಂದ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗುತ್ತವೆ. ಇನ್ನು ದೇಶಾದ್ಯಂತ ಶ್ರೀರಾಮ ಜಪ ಆರಂಭವಾಗಿದೆ. ಮತ್ತೊಂದು ಕಡೆ ಶ್ರೀರಾಮನ ವಿಗ್ರಹಗಳ ಮಾರಾಟ ಜೋರಾಗಿ ನಡೆಯುತ್ತಿದೆ.

ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಒಳಭಾಗದ ಅಂಗಡಿಗಳಲ್ಲಿ ರಾಮನ ಮೂರ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ. ವಿದೇಶ ಮತ್ತು ಅನ್ಯ ರಾಜ್ಯಗಳಿಂದ ಬಂದ ಜನರು ಇಲ್ಲಿ ರಾಮನ ವಿಗ್ರಹಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ಅಲ್ಲದೇ ಅನೇಕ ಪ್ರಯಾಣಿಕರು ಸೀತಾ, ರಾಮ ಹಾಗೂ ಹನುಮನ ಮೂರ್ತಿ ಖರೀದಿ ಮಾಡಿ ತಮ್ಮ ಊರುಗಳಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇಲ್ಲಿ ರಾಮನ ವಿವಿಧ ಬಗೆಯ ಮೂರ್ತಿಗಳಿದ್ದು, ಪ್ರಯಾಣಿಕರ ಕಣ್ಮನ ಸೆಳೆಯುತ್ತಿವೆ.

Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More