‘ಆಯಸ್ಸು ಜಾಸ್ತಿ ಆದಷ್ಟು ಹೆಚ್ಚು ಸಾವುಗಳನ್ನು ನೋಡಬೇಕು’; ಹಿರಿಯ ನಟ ಶ್ರೀನಾಥ್ ಬೇಸರ

Updated on: Jul 12, 2024 | 12:29 PM

ನಟಿ, ನಿರೂಪಕಿ ಅಪರ್ಣಾ ಅವರು ಕ್ಯಾನ್ಸರ್​ನಿಂದ ನಿಧನ ಹೊಂದಿದ್ದಾರೆ. ಇನ್ನು ಕೆಲವೇ ತಿಂಗಳಲ್ಲಿ ಅವರಿಗೆ 58 ವರ್ಷ ತುಂಬುತ್ತಿತ್ತು. ಅಪರ್ಣಾ ಅವರು ಹಲವು ವರ್ಷಗಳ ಕಾಲ ಬದುಕಬೇಕು ಎನ್ನುವ ಆಸೆಯನ್ನು ಹೊಂದಿದ್ದರು. ಅವರ ಸಾವಿನ ಬಗ್ಗೆ ಹಿರಿಯ ನಟ ಶ್ರೀನಾಥ್ ಮಾತನಾಡಿದ್ದಾರೆ.

ನಟ ಶ್ರೀನಾಥ್ ಅವರು ಅಪರ್ಣಾ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಬೆಂಗಳೂರಿನ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಪರ್ಣಾ ಸಾವಿನ ಬಗ್ಗೆ ಶ್ರೀನಾಥ್ ಬೇಸರ ಹೊರಹಾಕಿದ್ದಾರೆ. ‘ಆಯಸ್ಸು ಜಾಸ್ತಿ ಆದಷ್ಟು ಜಾಸ್ತಿ ಸಾವುಗಳನ್ನು ನೋಡುತ್ತಿದ್ದೇವೆ. ಇವರನ್ನು ಮಗು ಆದಾಗಿನಿಂದ ನೋಡುತ್ತಿದ್ದೆ. ಅಪರ್ಣಾ ಅವರ ಎಂಥಾ ಒಳ್ಳೆಯ ಸಂಸ್ಕಾರ ಇತ್ತು’ ಎಂದು ಅವರು ಹೇಳಿದ್ದಾರೆ. ಅಪರ್ಣಾ ಅವರು ನಿರೂಪಕಿಯಾಗಿ, ನಟಿಯಾಗಿ ಗಮನ ಸೆಳೆದಿದ್ದಾರೆ. ಅವರು ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೆ ಅವರು ನಿಧನ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More