ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮೇರೆಗೆ ದೆಹಲಿಗೆ ತೆರಳಿದ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Apr 03, 2024 | 4:01 PM

ಸರ್ದಾರ್ ವಲ್ಲಬ್ ಭಾಯ್ ಪಟೇಲ್ ನಂತರ ಭಾರತದ ಉಕ್ಕಿನ ಮನುಷ್ಯ ಎನಿಸಿಕೊಂಡಿರುವ ಅಮಿತ್ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಹೋಗುತ್ತಿರುವುದಾಗಿ ಹೇಳಿದ ಈಶ್ಪರಪ್ಪ ಫೋನಲ್ಲಿ ಮಾತಾಡುವಾಗಲೇ ಎಲ್ಲ ವಿಷಯ ತಿಳಿಸಿದ್ದೇನೆ, ಅದೆಲ್ಲವನ್ನು ಮತ್ತೊಮ್ಮೆ ಅವರಿಗೆ ಮುಖಾಮುಖಿಯಾಗಿ ವಿವರಿಸುತ್ತೇನೆ ಎಂದರು.

ಶಿವಮೊಗ್ಗ: ನಿನ್ನೆ ಸುದ್ದಿಗೊಷ್ಟಿಯೊಂದರಲ್ಲಿ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ (KS Eshwarappa) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಮ್ಮನ್ನು ದೆಹಲಿಗೆ ಬಂದು ಕಾಣುವಂತೆ ಫೋನ್ ಮಾಡಿ ಹೇಳಿದ್ದನ್ನು ಮಧ್ಯಮದವರಿಗೆ ತಿಳಿಸಿದ್ದರು. ಇದು ಶಿವಮೊಗ್ಗದಿಂದ ದೆಹಲಿಗೆ ವಿಮಾನ ಹತ್ತುವ ಮೊದಲು ಪತ್ರಕರ್ತರೊಂದಿಗೆ ಮಾತಾಡಿದ ಅವರು, ಸರ್ದಾರ್ ವಲ್ಲಬ್ ಭಾಯ್ ಪಟೇಲ್ ನಂತರ ಭಾರತದ ಉಕ್ಕಿನ ಮನುಷ್ಯ (Iron Man) ಎನಿಸಿಕೊಂಡಿರುವ ಅಮಿತ್ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಹೋಗುತ್ತಿರುವುದಾಗಿ ಹೇಳಿದರು. ಫೋನಲ್ಲಿ ಮಾತಾಡುವಾಗಲೇ ಎಲ್ಲ ವಿಷಯ ತಿಳಿಸಿದ್ದೇನೆ, ಅದೆಲ್ಲವನ್ನು ಮತ್ತೊಮ್ಮೆ ಅವರಿಗೆ ಮುಖಾಮುಖಿಯಾಗಿ ವಿವರಿಸುತ್ತೇನೆ ಎಂದು ಹೇಳಿದ ಅವರು ತಮ್ಮ ಕಾರ್ಯಕರ್ತರು ತಾನು ಬಂದ ಕೂಡಲೇ ಪ್ರಚಾರ ಕಾರ್ಯ ಆರಂಭಿಸೋಣ ಎಂದಿದ್ದಾರೆ ಎಂದರು. ಅಮಿತ್ ಶಾ ಅವರ ಮನಸ್ಸಲ್ಲಿ ಏನಿದೆ ಅಂತ ಗೊತ್ತಿಲ್ಲ, ಅದರೆ ಅವರು ಪಕ್ಷದ ಹಿರಿಯರಾಗಿರುವುದರಿಂದ ಅವರ ಮಾತಿಗೆ ಗೌರವ ನೀಡಿ ದೆಹಲಿಗೆ ಹೊಗುತ್ತಿರುವುದಾಗಿ ಈಶ್ವರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪ್ರತಾಪ್ ಸಿಂಹನಂಥ ರಾಷ್ಟ್ರಭಕ್ತ ಮತ್ತು ಹಿಂದೂತ್ವವಾದಿಯನ್ನು ಯಾರೂ ಖಂಡಿಸಲಾಗದು: ಕೆ ಎಸ್ ಈಶ್ವರಪ್ಪ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.