ಪ್ರೀತಂ ಗೌಡ ಇನ್ನೂ ಚಿಕ್ಕ ಹುಡುಗ, ರಾಜಕೀಯವಾಗಿ ಪ್ರಬುದ್ಧನಲ್ಲ: ವಿ ಸೋಮಣ್ಣ, ಬಿಜೆಪಿ ನಾಯಕ

ಅವನು ತಾನಾಡುವ ಭಾಷೆ ಮತ್ತು ಹೇಳಿಕೆಗಳ ಮೇಲೆ ಎಚ್ಚರ ಸಾಧಿಸಬೇಕಿದೆ, ರಾಜಕಾರಣದಲ್ಲಿ ಬೆಳೆಯಬೇಕಾದರೆ ಅದಕ್ಕೆ ಪೂರಕವಾದ ಭಾಷೆಯನ್ನು ಅಳವಡಿಸಿಕೊಳ್ಳಬೇಕು, ಮುಂಬರುವ ದಿನಗಳಲ್ಲಿ ಅದನ್ನು ಅವನು ಅರ್ಥಮಾಡಿಕೊಳ್ಳುತ್ತಾನೆ ಎಂಬ ನಂಬಿಕೆ ತನಗಿದೆ ಎಂದು ಸೋಮಣ್ಣ ಹೇಳಿದರು.

ಪ್ರೀತಂ ಗೌಡ ಇನ್ನೂ ಚಿಕ್ಕ ಹುಡುಗ, ರಾಜಕೀಯವಾಗಿ ಪ್ರಬುದ್ಧನಲ್ಲ: ವಿ ಸೋಮಣ್ಣ, ಬಿಜೆಪಿ ನಾಯಕ
|

Updated on: Feb 05, 2024 | 3:03 PM

ದೆಹಲಿ: ಇಂದು ಬೆಳಗ್ಗೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಹಿರಿಯ ಬಿಜೆಪಿ ನಾಯಕ ವಿ ಸೋಮಣ್ಣ (V Somanna) ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ (Preetham J Gowda) ಅವರಿಗೆ ಕೆಲ ಹಿತವಚನಗಳನ್ನು ಹೇಳಿದರು. ಕನ್ನಡಿಗರಿಗೆಲ್ಲ ಗೊತ್ತಿರುವ ಹಾಗೆ, ಪ್ರೀತಂ ಗೌಡ ಅವರು ಲೋಕ ಸಭಾ ಚುನಾವಣೆಗಾಗಿ ಜೆಡಿಎಸ್-ಬಿಜೆಪಿ ಹೊಂದಾಣಿಕೆಯನ್ನು (BJP-JDA alliance) ನಖಶಿಖಾಂತ ದ್ವೇಷಿಸುತ್ತಿದ್ದಾರೆ. ಹಾಸನದಿಂದ ಪ್ರಜ್ವಲ್ ಗೌಡ ಮತ್ತು ಮಂಡ್ಯದಿಂದ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧೆಗೆ ಬಿಜೆಪಿ ವರಿಷ್ಠರು ಅವಕಾಶ ನೀಡಲ್ಲ ಅಂತಲೂ ಅವರು ಹೇಳಿದ್ದಾರೆ. ಪ್ರೀತಂ ಧೋರಣೆಯನ್ನು ಸೋಮಣ್ಣ ಅವರ ಗಮನಕ್ಕೆ ತಂದಾಗ, ಅವನಿನ್ನೂ ಚಿಕ್ಕ ಹುಡುಗ, ರಾಜಕಾರಣದ ಬಗ್ಗೆ ಅಷ್ಟೆಲ್ಲ ಜ್ಞಾನ ಇಲ್ಲ, ಆವೇಶದಲ್ಲಿ ಮಾತಾಡುತ್ತಾನೆ ಎಂದು ಹೇಳಿದರು. ಅವನು ತಾನಾಡುವ ಭಾಷೆ ಮತ್ತು ಹೇಳಿಕೆಗಳ ಮೇಲೆ ಎಚ್ಚರ ಸಾಧಿಸಬೇಕಿದೆ, ರಾಜಕಾರಣದಲ್ಲಿ ಬೆಳೆಯಬೇಕಾದರೆ ಅದಕ್ಕೆ ಪೂರಕವಾದ ಭಾಷೆಯನ್ನು ಅಳವಡಿಸಿಕೊಳ್ಳಬೇಕು, ಮುಂಬರುವ ದಿನಗಳಲ್ಲಿ ಅದನ್ನು ಅವನು ಅರ್ಥಮಾಡಿಕೊಳ್ಳುತ್ತಾನೆ ಎಂಬ ನಂಬಿಕೆ ತನಗಿದೆ ಎಂದು ಸೋಮಣ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ