ಹಾಲು ಮತ್ತು ವಿದ್ಯುತ್ ದರ ಏರಿಕೆ ವಿರುದ್ಧ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹಿರಿಯ ನಾಗರಿಕರು

ಅರುಣ್​ ಕುಮಾರ್​ ಬೆಳ್ಳಿ

Updated on: Mar 28, 2025 | 11:21 AM

ಮತ್ತೊಬ್ಬ ಹಿರಿಯ ನಾಗರಿಕರು ಮಾತಾಡಿ ಸಂಸದ ಮತ್ತು ಶಾಸಕರಿಗೆ ಸಂಬಳ ಯಾಕೆ ಹೆಚ್ಚಿಸಬೇಕು? ಅವರಿಗೆ ಎಲ್ಲ ಸೌಕರ್ಯಗಳು ಸಿಗುತ್ತವೆ ಎಂದು ಹೇಳಿದರು. ಮಧ್ಯಮ ವರ್ಗದ ಜನರ ತುಂಬಾ ಕಷ್ಟಪಡಬೇಕಾಗುತ್ತಿದೆ, ನಮ್ಮಿಂದ ಕಿತ್ತುಕೊಂಡು ಬೇರೆಯವರಿಗೆ ಸರ್ಕಾರ ನೀಡುತ್ತದೆ, ಎಲ್ಲ ಬೆಲೆಗಳು ದುಬಾರಿಯಾಗಿವೆ, ಈ ಸರ್ಕಾರವನ್ನು ಕಿತ್ತೊಗೆದರೂ ಮುಂದಿನ ಸರ್ಕಾರ ಇದನ್ನು ಮುಂದುವರಿಸಿಕೊಂಡು ಹೋಗುತ್ತದೆ ಎಂದು ಅವರು ಹೇಳಿದರು.

ಮೈಸೂರು, ಮಾರ್ಚ್ 28: ಹಾಲು ಮತ್ತು ವಿದ್ಯುತ್ ದರ ಏರಿಕೆ ಹಿನ್ನೆಲೆಯಲ್ಲಿ ಜನ ರಾಜ್ಯ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಮೈಸೂರಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿರುವ ನಿವೃತ್ತ ಅಧಿಕಾರಿಯೊಬ್ಬರು (retired official), ಏನು ಮಾತಾಡಿದರೂ ಪ್ರಯೋಜನವಿಲ್ಲ, ಈ ಸರ್ಕಾರದ ಆಡಳಿತದಲ್ಲಿ ಸುಧಾರಣೆ ಕಾಣೋದು ಸಾಧ್ಯವಿಲ್ಲ, ಅಧಿಕಾರದಲ್ಲಿದ್ದೇವೆಂಬ ದುರಹಂಕಾರ ಎಂದು ಹೇಳಿದರು. ಜನರಿಗೆ ಬಿಟ್ಟೀ ಗ್ಯಾರಂಟಿಗಳನ್ನು ನೀಡಿ ಉದ್ಯೋಗಗಳನ್ನು ಕಿತ್ತುಕೊಂಡರು, ಗ್ಯಾರಂಟಿಗಳಿಂದಾಗಿ ಅನೇಕರು ದುಡಿಯಲು ಹೋಗುವುದನ್ನು ಬಿಟ್ಟಿದ್ದಾರೆ, ರಾಜ್ಯವನ್ನು ಶ್ರೀಲಂಕಾ ಮತ್ತ್ತು ಪಾಕಿಸ್ತಾನದಂಥ ಸ್ಥಿತಿಗೆ ದೂಡುವ ದಿನಗಳು ದೂರವಿಲ್ಲ ಎಂದು ಅವರು ಹೇಳಿದರು.

ವಿಡಿಯೋ ಸ್ಟೋರಿಗಳಿಗಾಗಿ ಕ್ಲಿಕ್ ಮಾಡಿ

ಇದನ್ನೂ ಓದಿ:  Electricity Price Hike: ವಿದ್ಯುತ್ ದರ ಏರಿಕೆ, ಗ್ರಾಹಕರಿಗೆ ಶಾಕ್ ನೀಡಿದ ಕೆಇಆರ್​ಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.