ಸಿದ್ದರಾಮಯ್ಯನವರ ಬಗ್ಗೆಯೇ ಕೆಎನ್ ರಾಜಣ್ಣ ಅಚ್ಚರಿ ಮಾತು: ಕಾಂಗ್ರೆಸ್​​​​ನಲ್ಲಿ ಸಂಚಲನ

Updated on: Oct 08, 2025 | 2:39 PM

ಹಿರಿಯ ರಾಜಕಾರಣಿಯಾಗಿರುವ ಮಾಜಿ ಸಚಿವ ಕೆಎನ್ ರಾಜಣ್ಣ ಹಿಂದಿನಿಂದಲೂ ನೇರ, ನಿಷ್ಠುರ ಮಾತು, ನಡೆನುಡಿಗೆ ಹೆಸರಾದವರು. ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವ ಬಗ್ಗೆ ಚರ್ಚೆಗಳು ಆರಂಭವಾದ ನಂತರ ಪಕ್ಷದ ಹೈಕಮಾಂಡ್ ವಿರುದ್ಧ ರಾಜಣ್ಣ ಮಾತುಗಳು ತೀಕ್ಷ್ಣವಾಗಿದ್ದವು. ಸಿದ್ದರಾಮಯ್ಯ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದರು. ಸಿದ್ದರಾಮಯ್ಯನವರ ವಿಚಾರಕ್ಕೆ ಹೈಕಮಾಂಡ್ ಎದುರು ಹಾಕಿಕೊಂಡಿದ್ದರು.

ತುಮಕೂರು, ಅಕ್ಟೋಬರ್ 08): ಹಿರಿಯ ರಾಜಕಾರಣಿಯಾಗಿರುವ ಮಾಜಿ ಸಚಿವ ಕೆಎನ್ ರಾಜಣ್ಣ ಹಿಂದಿನಿಂದಲೂ ನೇರ, ನಿಷ್ಠುರ ಮಾತು, ನಡೆನುಡಿಗೆ ಹೆಸರಾದವರು. ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವ ಬಗ್ಗೆ ಚರ್ಚೆಗಳು ಆರಂಭವಾದ ನಂತರ ಪಕ್ಷದ ಹೈಕಮಾಂಡ್ ವಿರುದ್ಧ ರಾಜಣ್ಣ ಮಾತುಗಳು ತೀಕ್ಷ್ಣವಾಗಿದ್ದವು. ಸಿದ್ದರಾಮಯ್ಯ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದರು. ಸಿದ್ದರಾಮಯ್ಯನವರ ವಿಚಾರಕ್ಕೆ ಹೈಕಮಾಂಡ್ ಎದುರು ಹಾಕಿಕೊಂಡಿದ್ದರು. ಅಲ್ಲದೇ ಪಕ್ಷದ ವರಿಷ್ಠರು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ನಿರಂತರವಾಗಿ ಹೇಳಿಕೆ ನೀಡುತ್ತಲೇ ಬಂದಿದ್ದರು. ಡಿಕೆಶಿ ಬಣ ಸಿಎಂ ಬದಲಾವಣೆ ಮಾತುಗಳನ್ನಾಡಿದಾಗ ರಾಜಣ್ಣ ಕೆಪಿಸಿಸಿ ಅಧ್ಯಕ್ಷರ ಬದಲಾವವಣೆ ಬಗ್ಗೆ ಧ್ವನಿ ಎತ್ತಿದ್ದರು. ಇಂತಹ ಮಾತುಗಳ ಹೊರ ಬಂದಾಗಲೆಲ್ಲ ರಾಜಣ್ಣ ಮೂಲಕ ಸಿದ್ದರಾಮಯ್ಯ ಹೇಳಿಸುತ್ತಿದ್ದಾರೆ. ಮುಖ್ಯಂಂತ್ರಿ ಮನಸ್ಸಿನಲ್ಲಿ ಇರುವುದು ರಾಜಣ್ಣ ಮೂಲಕ ಹೊರಗೆ ಬರುತ್ತಿದೆ. ಅವರ ಹೇಳಿಕೆಗಳು ಅದನ್ನು ಧ್ವನಿಸುತ್ತವೆ ಎಂದು ಪಕ್ಷದ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದವು. ಈ ಮಟ್ಟಿಗೆ ರಾಜಣ್ಣ ಅವರು ಸಿದ್ದರಾಮಯ್ಯನವರ ಬೆನ್ನಿಗೆ ನಿಂತಿದ್ದರು. ಆದ್ರೆ, ಇದೀಗ ಅದೇನು ಆಯ್ತೋ ಏನೋ ಸಿದ್ದರಾಮಯ್ಯನವರು ಮೊದಲಿನಂತೆ ಇಲ್ಲ ಎನ್ನುವ ಅಚ್ಚರಿ ಹೇಳಿಕೆ ನೀಡಿದ್ದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More