Assembly Polls: ಪ್ರಜಾಧ್ವನಿ ಯಾತ್ರೆಗೆ ಸೇರದ ಜನ, ಹೋಟೆಲೊಂದರಲ್ಲಿ ಹರಟುತ್ತಾ ಸಮಯ ಕಳೆದ ಕಾಂಗ್ರೆಸ್ ನಾಯಕರು!

ಅರುಣ್​ ಕುಮಾರ್​ ಬೆಳ್ಳಿ

Updated on: Jan 23, 2023 | 3:07 PM

ಕೋಲಾರ ಜಿಲ್ಲೆ ಪ್ರವಾಸದಲ್ಲಿ ಡಿಕೆ ಶಿವಕುಮಾರ ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ರಾಮಲಿಂಗಾರೆಡ್ಡಿ ಮೊದಲಾದ ಘಟಾನುಘಟಿ ನಾಯಕರಿದ್ದರೂ ಜನರ ಕೊರತೆ ಎದ್ದುಕಾಣುತಿತ್ತು

ಕೋಲಾರ: ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪ್ರಜಾಧ್ವನಿ ಯಾತ್ರೆಗೆ (Prajadhvani Yatre) ಆಗಲೇ ಹಿನ್ನೆಡೆ ಉಂಟಾಗುತ್ತಿದೆಯೇ? ಈ ವರದಿಯನ್ನು ನೋಡುತ್ತಿದ್ದರೆ ಹೌದೆನಿಸುತ್ತದೆ. ಸೋಮವಾರ ಕೋಲಾರ ಜಿಲ್ಲೆ ಪ್ರವಾಸದಲ್ಲಿ ಡಿಕೆ ಶಿವಕುಮಾರ (DK Shivakumar), ಸಿದ್ದರಾಮಯ್ಯ (Siddaramaiah), ಬಿಕೆ ಹರಿಪ್ರಸಾದ್, ರಾಮಲಿಂಗಾರೆಡ್ಡಿ ಮೊದಲಾದ ಘಟಾನುಘಟಿ ನಾಯಕರಿದ್ದರೂ ಜನರ ಕೊರತೆ ಎದ್ದುಕಾಣುತಿತ್ತು. ಹಾಗಾಗೇ, ಈ ನಾಯಕರೆಲ್ಲ, ಜಿಲ್ಲೆಯ ನರಸಾಪುರದಲ್ಲಿರುವ ಹೋಟೆಲೊಂದರಲ್ಲಿ ಲೋಕಾಭಿರಾಮವಾಗಿ ಮಾತಾಡುತ್ತಾ ಹೆಚ್ಚಿನ ಸಮಯ ಕಳೆದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.