ಶಾಸಕ ಕೊತ್ತೂರು ಮಂಜುನಾಥ್​ಗೆ ಪರೋಕ್ಷವಾಗಿ ಬೆಂಡೆತ್ತಿದ ಹಿರಿಯ ಶಾಸಕ ಕೆಎಂ ಶಿವಲಿಂಗೇಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: May 17, 2025 | 7:24 PM

ಕೊತ್ತೂರು ಮಂಜುನಾಥ್ ಹೇಳಿದ್ದ ಸರಿಯೋ ತಪ್ಪೋ ಅಂತ ವಿಶ್ಲೇಷಣೆ ಮಾಡಲ್ಲ, ಅವರ ಮಾತನ್ನು ಡಿಫೆಂಡ್ ಕೂಡ ಮಾಡಲ್ಲ, ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ಇಂಥ ಸೂಕ್ಷ್ಮ ವಿಷಯಗಳ ಬಗ್ಗೆ ತಾನು ಕಾಮೆಂಟ್ ಮಾಡಲ್ಲ, ಅದು ಅವರವರ ವಿವೇಕಕ್ಕೆ ಬಿಟ್ಟ ವಿಷಯ ಎಂದು ಪ್ರತಿಯೊಂದು ಶಬ್ದವನ್ನು ಅಳೆದು ತೂಗಿ ಬಳಸಿದ ಶಿವಲಿಂಗೇಗೌಡ ಹೇಳಿದರು.

ಹಾಸನ, ಮೇ 17: ದೇಶದ ಅಳಿವು ಉಳಿವಿನ ಪ್ರಶ್ನೆ ಬಂದಾಗ ದೇಶದ ಪ್ರಧಾನ ಮಂತ್ರಿ (Prime Minister of India) ನಿರ್ಧಾರ ತೆಗೆದುಕೊಳ್ಳುತ್ತಾರೆ, ಪಾಕಿಸ್ತಾನದ ಮೇಲೆ ಯುದ್ದ ನಡೆದಾಗ ಭಾರತದ ಪ್ರಧಾನಿ ದೇಶವನ್ನು ಉತ್ತಮವಾಗಿ ಮುನ್ನಡೆಸಿದ್ದಾರೆ,  ಎಂದು ಕಾಂಗ್ರೆಸ್ ಶಾಸಕ ಕೆಎಂ ಶಿವಲಿಂಗೇಗೌಡ ಗೌಡ ಹೇಳಿದರು. ಕೊತ್ತೂರು ಮಂಜುನಾಥ್ ನೀಡಿದ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಅವರು, ನಮ್ಮೆಲ್ಲರಿಗೂ ದೇಶ ಮುಖ್ಯ, ದೇಶ ಇದ್ದರೆ ನಾವೆಲ್ಲ, ಕೆಲವರು ತಿಳಿದು ಮಾತಾಡುತ್ತಾರೆ ಕೆಲವರು ತಿಳಿಯದೆ ಮಾತಾಡುತ್ತಾರೆ, ಯುದ್ಧದಂಥ ಸಂದರ್ಭಗಳಲ್ಲಿ ಅನಾವಶ್ಯಕ ಹೇಳಿಕೆಗಳನ್ನು ನೀಡಬಾರದು, ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡಬಾರದು ಎಂದು ಅವರು ಹೇಳಿದರು.

ಇದನ್ನೂ ಓದಿ:  ಸರ್ಕಾರದ ಸಾಧನೆ ಮತ್ತು ಬಿಜೆಪಿಯ ಅಪಪ್ರಚಾರ ಜನಕ್ಕೆ ತಿಳಿಸಲು ಸಮಾವೇಶ ಮಾಡುತ್ತಿದ್ದೇವೆ: ಕೆಎಂ ಶಿವಲಿಂಗೇಗೌಡ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.