Nithya Bhavishya: ಭಾದ್ರಪದ ಮಾಸದ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ

|

Updated on: Sep 20, 2024 | 6:50 AM

ಭಾದ್ರಪದ ಮಾಸದ ಮೂರನೇ ಶುಕ್ರವಾರ ಸೆ.20ರ ಶುಕ್ರವಾರ ಇಂದು ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ದ್ವಾದಶ ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಭಾದ್ರಪದ ಮಾಸದ ಮೂರನೇ ಶುಕ್ರವಾರ ಇಂದು (ಸೆಪ್ಟೆಂಬರ್​ 20) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ತೃತೀಯಾ, ನಿತ್ಯ ನಕ್ಷತ್ರ: ರೇವತೀ, ಯೋಗ: ಧ್ರುವ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 29 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:55 ರಿಂದ 12:26, ಯಮಘಂಡ ಕಾಲ ಮಧ್ಯಾಹ್ನ 03:27 ರಿಂದ 04:58ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:53 ರಿಂದ ಮಧ್ಯಾಹ್ನ 09:24ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on