ಬೆಂಗಳೂರು ಸ್ಯಾಟೆಲೈಟ್ ಬಸ್ ನಿಲ್ದಾಣದ ಬಳಿ ಬೆಳ್ಳಂಬೆಳಿಗ್ಗೆ ಸರಣಿ ಅಪಘಾತ, ಒಬ್ಬನಿಗೆ ಮಾತ್ರ ಗಾಯ

ಅರುಣ್​ ಕುಮಾರ್​ ಬೆಳ್ಳಿ

Updated on: Mar 15, 2025 | 10:20 AM

ಪ್ರಾಥಮಿಕ ಮಾಹಿತಿಯ ಪ್ರಕಾರ ಕ್ಯಾಂಟರ್ ಚಾಲಕ ಮದ್ಯದ ಅಮಲಿನಲ್ಲಿ ವಾಹನ ಓಡಿಸುತ್ತಿದ್ದ. ಅಪ್ಪಚ್ಚಿಯಾಗಿರುವ ಆಟೋರಿಕ್ಷಾದ ಚಾಲಕ ಅಪಘಾತ ನಡೆದ ಸಮಯದಲ್ಲಿ ಅದರೊಳಗೆ ಕೂತಿರಲಿಲ್ಲ. ಆಟೋರಿಕ್ಷಾದ ಸ್ಥಿತಿ ನೋಡಿದರೆ ಅಪಘಾತದ ಭೀಕರತೆ ಅರ್ಥವಾದೀತು. ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಸ್ಟೇಷನ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದೆ.

ಬೆಂಗಳೂರು, 15 ಮಾರ್ಚ್: ಇಂದು ಬೆಳಗ್ಗೆ ಸುಮಾರು 5 ಗಂಟೆಗೆ ನಗರದ ಬಾಪೂಜಿನಗರದಲ್ಲಿರುವ ಸ್ಯಾಟೆಲೈಟ್ ಬಸ್ ನಿಲ್ದಾಣದ (Satellite bus stop) ಬಳಿ ನಡೆದಿರುವ ಘಟನೆ ಇದು. ಕ್ಯಾಂಟರ್ ಒಂದು ಮೈಸೂರಿಗೆ ಹೊರಡುತ್ತಿದ್ದ ಕೆಎಸ್​ಆರ್​ಟಿಸಿ ಐರಾವತ ಬಸ್ಸು ಸೇರಿದಂತೆ, ಕಾರು, ಲಾರಿ, ಆಟೋ ಮತ್ತು ಬೈಕ್ ಗೆ ಗುದ್ದಿ ಸರಣಿ ಅಪಘಾತ ಸಂಭವಿಸಿದೆ. ಕ್ಯಾಂಟರ್ ನಿಂದ ಗುದ್ದಿಸಿಕೊಂಡ ಲಾರಿ ತನ್ನ ಮುಂದಿದ್ದ ನಿಂತಿದ್ದ ಆಟೋ ಮೇಲೆ ಹತ್ತಿದ ಕಾರಣ ಅದು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದೆ. ಸಮಾಧಾನಕರ ಸಂಗತಿಯೆಂದರೆ ಇಷ್ಟು ಭಯನಕ ಘಟನೆ ನಡೆದರೂ ಒಬ್ಬ ವ್ಯಕ್ತಿ ಮಾತ್ರ ಗಾಯಗೊಂಡು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಬಸ್ ಚಾಲಕನಿಗೆ ಫಿಟ್ಸ್, ಸರಣಿ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರು ಜಸ್ಟ್​ ಮಿಸ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.