ಕೋಲಾರದಲ್ಲಿ ಹಣದ ವಿಚಾರವಾಗಿ ಗಲಾಟೆ: ಮನೆಗೆ ಬೆಂಕಿ ಹಚ್ಚಿ ಹಲ್ಲೆ

Edited By:

Updated on: Jan 01, 2024 | 11:25 AM

ಹಣದ ವಿಚಾರವಾಗಿ ಗಲಾಟೆ ನಡೆದು, ಮನೆಗೆ ಬೆಂಕಿ ಹಚ್ಚಿ ಹಲ್ಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ರವಿವಾರ (ಡಿ.31)ರ ರಾತ್ರಿ ನಡೆದಿದೆ.

ಹೊಸ ವರ್ಷದ ದಿನವೇ ಹಣದ ವಿಚಾರವಾಗಿ ಗಲಾಟೆ ನಡೆದು, ಮನೆಗೆ ಬೆಂಕಿ ಹಚ್ಚಿ ಹಲ್ಲೆ ಮಾಡಿರುವ ಘಟನೆ ಕೋಲಾರ (Kolar) ಜಿಲ್ಲೆಯ ಮುಳಬಾಗಿಲು (Mulabagilu) ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ರವಿವಾರ (ಡಿ.31)ರ ರಾತ್ರಿ ನಡೆದಿದೆ. ಸಂತೋಷ್, ಸುರೇಶ್ ಸೇರಿದಂತೆ ಹಲವರು ರೆಡ್ಡಪ್ಪ ಎಂಬುವವರ ಮನೆಗೆ ಬೆಂಕಿ ಹಚ್ಚಿ ಗಲಾಟೆ ಮಾಡಿದ್ದಾರೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನೆ ಸಂಬಂಧ ಪೊಲೀಸರು ಆರು ಜನರನ್ನು ವಶಕ್ಕೆ ಪಡೆದಿದ್ದಾರೆ.

Follow Us
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More