ಮೈಸೂರಿನಲ್ಲಿ ಶಿವರಾಜ್​ಕುಮಾರ್ ನೋಡೋಕೆ ಮುಗಿಬಿದ್ದ ಅಭಿಮಾನಿಗಳು

| Updated By: ರಾಜೇಶ್ ದುಗ್ಗುಮನೆ

Updated on: Jan 30, 2022 | 3:18 PM

ಶಿವರಾಜ್​ಕುಮಾರ್​ ಅವರು ಮೈಸೂರಿಗೆ ತೆರಳಿದ್ದಾರೆ. ಈ ವೇಳೆ ಅವರು ಶಕ್ತಿಧಾಮ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಇದರ ಜತೆಗೆ ಮೈಸೂರಿನಲ್ಲಿ ಖಾಸಗಿ ಆಸ್ಪತ್ರೆ ಉದ್ಘಾಟನೆ ಕೂಡ ಮಾಡಿದ್ದಾರೆ.

ಮೈಸೂರಿನಲ್ಲಿ ಶಿವರಾಜ್​ಕುಮಾರ್ ನೋಡೋಕೆ ಮುಗಿಬಿದ್ದ ಅಭಿಮಾನಿಗಳು
ಶಿವರಾಜ್​ಕುಮಾರ್​

ರಾಜ್​ಕುಮಾರ್ (Rajkumar) ಕುಟುಂಬಕ್ಕೂ, ಮೈಸೂರಿಗೂ  ಅವಿನಾಭಾವ ಸಂಬಂಧವಿದೆ. ಇದಕ್ಕೆ ಕಾರಣ ಶಕ್ತಿಧಾಮ (Shakthidhama ) ಆಶ್ರಮ. ಈ ಆಶ್ರಮ ಅನೇಕ ಮಕ್ಕಳಿಗೆ ಆಶ್ರಯವಾಗಿದೆ. ಶಕ್ತಿಧಾಮದ ಜವಾಬ್ದಾರಿಯನ್ನು ಶಿವರಾಜ್​ಕುಮಾರ್ (Shivarajkumar) ಪತ್ನಿ ಗೀತಾ ಶಿವರಾಜ್​ಕುಮಾರ್​ ನೋಡಿಕೊಳ್ಳುತ್ತಿದ್ದಾರೆ. ಶಿವರಾಜ್​ಕುಮಾರ್​ ಅವರು ಮೈಸೂರಿಗೆ ತೆರಳಿದ್ದಾರೆ. ಈ ವೇಳೆ ಅವರು ಶಕ್ತಿಧಾಮ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಇದರ ಜತೆಗೆ ಮೈಸೂರಿನಲ್ಲಿ ಖಾಸಗಿ ಆಸ್ಪತ್ರೆ ಉದ್ಘಾಟನೆ ಕೂಡ ಮಾಡಿದ್ದಾರೆ. ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲೇ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಈ ವಿಡಿಯೋ ವೈರಲ್​ ಆಗುತ್ತಿದೆ. ಜ.26ರಂದು ಶಕ್ತಿಧಾಮದ ಮಕ್ಕಳ ಜೊತೆಗೆ ಶಿವಣ್ಣ ಮತ್ತು ಗೀತಾ ಅವರು ಗಣರಾಜ್ಯೋತ್ಸವ ಆಚರಿಸಿದ್ದರು. ಧ್ವಜಾರೋಹಣದ ಬಳಿಕ ಆಶ್ರಮದ ಮಕ್ಕಳಿಗೆ ಸಿಹಿ ಹಂಚಿದ್ದರು. ಮಕ್ಕಳ ಜೊತೆ ಶಿವಣ್ಣ ಜಾಲಿ ರೈಡ್​ ತೆರಳಿದ್ದ ವಿಡಿಯೋ ಕೂಡ ವೈರಲ್ ಆಗಿತ್ತು.​

ಇದನ್ನೂ ಓದಿ: ಶಕ್ತಿಧಾಮದಲ್ಲಿ ಶಿವರಾಜ್​ಕುಮಾರ್​ ಧ್ವಜಾರೋಹಣ; ಮಕ್ಕಳ ಜತೆ ಗಣರಾಜ್ಯೋತ್ಸವ ಆಚರಣೆ

‘ಗೀತಾ ಅವರು ತಾಯಿ ಸ್ಥಾನದಲ್ಲಿ ಇದ್ದಾರೆ’; ಮೈಸೂರಿನ ಶಕ್ತಿಧಾಮದ ಬಗ್ಗೆ ಶಿವರಾಜ್​ಕುಮಾರ್​ ಮಾತು

Follow us on