RCB victory parade stampede: ಕಾಲ್ತುಳಿತದ ನಡುವೆ ನೂರರು ಮೊಬೈಲ್ ಎಗರಿಸಿದ ಕಳ್ಳರು…!
ಬೆಂಗಳೂರಿನಲ್ಲಿ ನಿನ್ನೆ ಯಾರು ಊಹಿಸಲಾರದ ಘಟನೆ ನಡೆದು ಹೋಗಿದೆ. ಏಕಾಏಕಿ ಚಿನ್ನಸ್ವಾಮಿ ಮೈದಾನಕ್ಕೆ ಅಪಾರ ಅಭಿಮಾನಿಗಳು ಹರಿದು ಬಂದ ಪರಿಣಾಮ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಈ ಘೋರ ದುರಂತದಲ್ಲಿ 11 ಮಂದಿ ಅಮಾಯಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ RCB ಮ್ಯಾನೆಜ್ಮೆಂಟ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇನ್ನು ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಕಳ್ಳರ ಕೈಚಳಕ ತೋರಿಸಿದ್ದಾರೆ.
ಬೆಂಗಳೂರು, (ಜೂನ್ 05): ಬೆಂಗಳೂರಿನಲ್ಲಿ ನಿನ್ನೆ ಯಾರು ಊಹಿಸಲಾರದ ಘಟನೆ ನಡೆದು ಹೋಗಿದೆ. ಏಕಾಏಕಿ ಚಿನ್ನಸ್ವಾಮಿ ಮೈದಾನಕ್ಕೆ ಅಪಾರ ಅಭಿಮಾನಿಗಳು ಹರಿದು ಬಂದ ಪರಿಣಾಮ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಈ ಘೋರ ದುರಂತದಲ್ಲಿ 11 ಮಂದಿ ಅಮಾಯಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ RCB ಮ್ಯಾನೆಜ್ಮೆಂಟ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇನ್ನು ನೂಕುನುಗ್ಗಲು ವೇಳೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಕಾಲ್ತುಳಿತದ ವೇಳೆ ಕಳ್ಳರು ನೂರಾರು ಮೊಬೈಲ್ ಎಗರಿಸಿದ್ದಾರೆ. ಈ ಬಗ್ಗೆ ಮೊಬೈಲ್ ಕಳೆದುಕೊಂಡುವರು ದೂರು ನೀಡಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಒಟ್ಟು 70ಕ್ಕೂ ಹೆಚ್ಚು ಕೇಸ್ ದಾಖಲಾಗಿವೆ. ಇನ್ನು ಮೊಬೈಲ್ ಕಳೆದುಕೊಂಡುವರು ದೂರು ನೀಡಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಬಳಿ ಸಾಲುಗಟ್ಟಿನಿಂತಿರುವ ದೃಶ್ಯ ಇಲ್ಲಿದೆ ನೋಡಿ
Loading...
Unable to load recommendations.
Follow Us