ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ
ಬಿಸಿಲ ಬೇಗೆಯಲ್ಲಿ ಬೆಂದು ಹೋಗುತ್ತಿದ್ದ ಜನರಿಗೆ ಮಳೆರಾಯ ತಂಪಾಗಿಸಿದ್ದಾನೆ. ಹೌದು....ಏಪ್ರಿಲ್ ಮೊದಲ ವಾರದಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳವಾಗಿದ್ದು, ಜನರು ಹೈರಾಣಾಗಿದ್ದಾರೆ. ಈ ಹೀಟ್ ವೇವ್ ನಡುವೆ ಹಾಸನದಲ್ಲಿ ವರುಣ ಅಬ್ಬರಿಸಿದ್ದಾನೆ. ಹೌದು...ಸಂಜೆಯಾಗುತ್ತಿದ್ದಂತೆಯೇ ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ, ದೊಡ್ಡಮಗ್ಗೆ ಗ್ರಾಮದಲ್ಲಿ ಗಾಳಿ ಮಳೆ ಅಬ್ಬರ ಶುರುವಾಗಿದ್ದು, ಭಾರಿ ಗಾಳಿಗೆ ಕಾಲೇಜು ಕಟ್ಟಡ, ಬಿಜಿಎಸ್ ಸಮುದಾಯಭವನ ಹಾಗೂ ವಾಣಿಜ್ಯ ಮಳಿಗೆಗಳಿಗೆ ಅಳವಡಿಸಿದ್ದ ಶೀಟ್ಗಳು ಹಾರಿ ಹೋಗಿವೆ.
ಹಾಸನ, (ಏಪ್ರಿಲ್ 20): ಬಿಸಿಲ ಬೇಗೆಯಲ್ಲಿ ಬೆಂದು ಹೋಗುತ್ತಿದ್ದ ಜನರಿಗೆ ಮಳೆರಾಯ ತಂಪಾಗಿಸಿದ್ದಾನೆ. ಹೌದು….ಏಪ್ರಿಲ್ ಮೊದಲ ವಾರದಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳವಾಗಿದ್ದು, ಜನರು ಹೈರಾಣಾಗಿದ್ದಾರೆ. ಈ ಹೀಟ್ ವೇವ್ ನಡುವೆ ಹಾಸನದಲ್ಲಿ ವರುಣ ಅಬ್ಬರಿಸಿದ್ದಾನೆ. ಹೌದು…ಸಂಜೆಯಾಗುತ್ತಿದ್ದಂತೆಯೇ ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ, ದೊಡ್ಡಮಗ್ಗೆ ಗ್ರಾಮದಲ್ಲಿ ಗಾಳಿ ಮಳೆ ಅಬ್ಬರ ಶುರುವಾಗಿದ್ದು, ಭಾರಿ ಗಾಳಿಗೆ ಕಾಲೇಜು ಕಟ್ಟಡ, ಬಿಜಿಎಸ್ ಸಮುದಾಯಭವನ ಹಾಗೂ ವಾಣಿಜ್ಯ ಮಳಿಗೆಗಳಿಗೆ ಅಳವಡಿಸಿದ್ದ ಶೀಟ್ಗಳು ಹಾರಿ ಹೋಗಿವೆ. ಅಲ್ಲದೇ ಮರದ ಕೊಂಬೆಗಳು ಮುರಿದು ಬಿದ್ದು ಎರಡು ಕಾರುಗಳು ಜಖಂ ಆಗಿದ್ದರೆ, ಇನ್ನೊಂದೆಡೆ ಮರದ ಕೊಂಬೆ ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ಹಲವು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಹೀಗೆ ಮಳೆರಾಯ ಸಾಲು ಸಾಲು ಅವಾಂತರ ಸೃಷ್ಟಿಸಿದ್ದಾನೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
