22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ನಟ ಶಬರೀಶ್

Updated on: Jun 23, 2025 | 7:27 PM

ನಿರ್ದೇಶಕ ನಂದ ಕಿಶೋರ್ ಅವರು ನಟ ಶಬರೀಶ್ ಶೆಟ್ಟಿಗೆ 22 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪವಿದೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಶಬರೀಶ್ ಶೆಟ್ಟಿ ಅವರು ದೂರು ಕೊಟ್ಟಿದ್ದಾರೆ. ಪೊಲೀಸ್ ಠಾಣೆಗೆ ದೂರು ನೀಡುವ ಬದಲು ವಾಣಿಜ್ಯ ಮಂಡಳಿಗೆ ಬಂದಿರುವುದು ಯಾಕೆ? ಇದಕ್ಕೆ ಶಬರೀಶ್ ಶೆಟ್ಟಿ ಉತ್ತರಿಸಿದ್ದಾರೆ.

ನಟ ಶಬರೀಶ್ ಶೆಟ್ಟಿ ಅವರಿಗೆ ನಿರ್ದೇಶಕ ನಂದ ಕಿಶೋರ್ (Nanda Kishore) 22 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಶಬರೀಶ್ ಶೆಟ್ಟಿ ದೂರು ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ದೂರು ನೀಡುವ ಬದಲು ವಾಣಿಜ್ಯ ಮಂಡಳಿಗೆ (Karnataka Film Chamber Of Commerce) ಬಂದಿರುವುದು ಯಾಕೆ ಎಂಬದನ್ನು ಶಬರೀಶ್ ಶೆಟ್ಟಿ ವಿವರಿಸಿದ್ದಾರೆ. ‘ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂದ ಕಿಶೋರ್ ನನ್ನ ಬಳಿ ಹಣ ಪಡೆದರು. ಆದರೆ ನನಗೆ ಮೋಸ ಆಗಿದೆ. ಚಿತ್ರರಂಗ ಒಂದು ಕುಟುಂಬದಂತೆ. ಹಾಗಾಗಿ ಕುಟುಂಬದ ಒಳಗೆ ಮೊದಲು ಸಮಸ್ಯೆ ಬಗೆಹರಿಸಿಕೊಳ್ಳೋಣ ಅಂತ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದೇನೆ. ಇಲ್ಲಿ ನ್ಯಾಯ ಸಿಗದೇ ಇದ್ದರೆ ಕಾನೂನಿನ ಮೊರೆ ಹೋಗುತ್ತೇನೆ’ ಎಂದು ಶಬರೀಶ್ ಶೆಟ್ಟಿ (Shabarish Shetty) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More