AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಸಾರಿಗೆ ಬಸ್​ ಕಿಟಕಿ ಮೇಲೆ ಕುಳಿತು ಅಪಾಯಕಾರಿ ಪ್ರಯಾಣ ಮಾಡಿದ ಮಹಿಳೆ

ಗದಗ: ಸಾರಿಗೆ ಬಸ್​ ಕಿಟಕಿ ಮೇಲೆ ಕುಳಿತು ಅಪಾಯಕಾರಿ ಪ್ರಯಾಣ ಮಾಡಿದ ಮಹಿಳೆ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: Rakesh Nayak Manchi|

Updated on: Jul 16, 2023 | 5:05 PM

Share

ಕುಳಿತುಕೊಳ್ಳಲು ಜಾಗವಿಲ್ಲದೆ ಮಹಿಳೆಯೊಬ್ಬರು ವಾಯುವ್ಯ ಸಾರಿಗೆ ಬಸ್​ನ ಕಿಟಿಯಲ್ಲಿ ಕುಳಿತುಕೊಂಡು ಅಪಾಯಕಾರಿಯಾಗಿ ಪ್ರಯಾಣಿಸಿದ ಘಟನೆ ಗದಗದಲ್ಲಿ ನಡೆದಿದೆ.

ಗದಗ, ಜುಲೈ 16: ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ (Shakti Scheme) ಜಾರಿ ನಂತರ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರ ಹವಾ ಸೃಷ್ಟಿಯಾಗಿದೆ. ಹೆಚ್ಚಿನ ಬಸ್​ಗಳಲ್ಲಿ ಫುಲ್ ರಶ್ ಆಗಿ ಸಂಚರಿಸುತ್ತಿವೆ. ಅದರಂತೆ ಗದಗದಲ್ಲೂ ಸಾರಿಗೆ ಬಸ್​ಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಕುಳಿತುಕೊಳ್ಳಲು ಜಾಗವಿಲ್ಲದೆ ಮಹಿಳೆಯೊಬ್ಬರು ವಾಯುವ್ಯ (NWKRTC) ಬಸ್​ನ ಕಿಟಕಿ ಮೇಲೆ ಕುಳಿತುಕೊಂಡು ಪ್ರಯಾಣಿಸಿದ್ದಾರೆ. ಗದಗ ನಗರದಿಂದ ಹುಲಕೋಟಿ ಗ್ರಾಮಕ್ಕೆ ತೆರಳುವ ಬಸ್​ನಲ್ಲಿ ಈ ರೀತಿ ಪ್ರಯಾಣ ಮಾಡಲಾಗಿದೆ. ಈ ರೀತಿಯ ಪ್ರಯಾಣದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾದರೂ ಕಿಟಿಕಿಯಿಂದ ಹೊರಗಡೆ ಬಿಳುವ ಸಾಧ್ಯತೆ ಹೆಚ್ಚು. ಅಷ್ಟೇ ಅಲ್ಲದೆ, ಓವರ್ ಟೇಕ್ ಮಾಡುವಾಗ ಬೇರೊಂದು ವಾಹನ ಸೊಂಟಕ್ಕೆ ಹೊಡೆಯುವ ಸಾಧ್ಯತೆಯೂ ಹೆಚ್ಚು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More