ಡಾ ರಾಜ್ ಕನಸಿನ ಕೂಸಾಗಿರುವ ಮೈಸೂರಿನ ಶಕ್ತಿಧಾಮ ಆಶ್ರಮಕ್ಕೆ ಪುನೀತ್ ರಾಜ್ ಕುಮಾರ್ ಎಲ್ಲವೂ ಆಗಿದ್ದರು

ಆದರೆ ಶಕ್ತಿಧಾಮ ಡಾ ರಾಜ್ ಅವರ ಕನಸಾಗಿರುವುದರಿಂದ ಅದರಲ್ಲಿರುವ ಮಹಿಳೆಯರಿಗೆ, ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಪುನೀತ್ ನೋಡಿಕೊಳ್ಳುತಿದ್ದರು.

ಡಾ ರಾಜ್ ಕನಸಿನ ಕೂಸಾಗಿರುವ ಮೈಸೂರಿನ ಶಕ್ತಿಧಾಮ ಆಶ್ರಮಕ್ಕೆ ಪುನೀತ್ ರಾಜ್ ಕುಮಾರ್ ಎಲ್ಲವೂ ಆಗಿದ್ದರು
| Updated By: preethi shettigar

Updated on: Oct 31, 2021 | 10:06 AM

ಡಾ ರಾಜ್ ಕುಮಾರ್ ಆಶಯದಂತೆ ಮೈಸೂರಿನಲ್ಲಿ ಸ್ಥಾಪಿಸಲಾಗಿರುವ ಅನಾಥ ಹೆಣ್ಣುಮಕ್ಕಳ ಕೇಂದ್ರ ಶಕ್ತಿಧಾಮದ ಮಕ್ಕಳಿಗೆ ಅಕ್ಷರಶಃ ಅನಾಥ ಪ್ರಜ್ಞೆ ಕಾಡುತ್ತಿದೆ. ಅವರೆಲ್ಲರ ಪ್ರೀತಿಯ ಅಣ್ಣ, ಪುನೀತ್ ಅಂಕಲ್ ಮತ್ತು ಅಪ್ಪು ಸರ್ ಅವರ ಹಠಾತ್ ನಿಧನ ಇಲ್ಲಿನ ಮಕ್ಕಳು ಚೇತರಿಸಿಕೊಳ್ಳಲು ಕಷ್ಟವಾಗುವ ಆಘಾತ ನೀಡಿದೆ. ಪುನೀತ್ ಈ ಆಶ್ರಮ ಎಲ್ಲ ಖರ್ಚುವೆಚ್ಚಗಳನ್ನು ನೋಡಿಕೊಳ್ಳುತ್ತಿದ್ದರು. ಆಶ್ರಮದ ಸಂಸ್ಥಾಪಕಿ ಪಾರ್ವತಮ್ಮ ರಾಜಕುಮಾರ ಅವರು ವಿಧಿವಶರಾದ ನಂತರ ಅದರ ಉಸ್ತುವಾರಿಯನ್ನು ಹೆಗಲಿಗೇರಿಸಿಕೊಂಡ ಪುನೀತ್ ಮಕ್ಕಳ ಪಾಲಿಗೆ ಎಲ್ಲವೂ ಆಗಿದ್ದರು.

ಮೊದಲೆಲ್ಲ ಅಬಲೆಯರ ಆಶ್ರಮಕ್ಕೆ ಅನುದಾನ ಸಿಗುತ್ತಿತ್ತು. ಯಾಕೆಂದರೆ ಅತ್ಯುತ್ತಮವಾಗಿ ನಿರ್ವಹಿಸಲ್ಪಡುತ್ತಿದ್ದ ಇಂಥ ಆಶ್ರಮಗಳಿಗೆ ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗಿನ ಸರ್ಕಾರವು ಸಾಂತ್ವನ ಕೇಂದ್ರಗಳನ್ನು ಜೊತೆಗೂಡಿಸಿ ಅನುದಾನ ನೀಡಲಾರಂಭಿಸಿತ್ತು. ಕೋವಿಡ್ ಸೋಂಕು ಭಾರತವನ್ನು ಪ್ರವೇಶಿಸಿ ಹಾಹಾಕಾರ ಸೃಷ್ಟಿಸಿದ ನಂತರ ಅನುದಾನವನ್ನು ನಿಲ್ಲಿಸಲಾಗಿದೆ.

ಆದರೆ ಶಕ್ತಿಧಾಮ ಡಾ ರಾಜ್ ಅವರ ಕನಸಾಗಿರುವುದರಿಂದ ಅದರಲ್ಲಿರುವ ಮಹಿಳೆಯರಿಗೆ, ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಪುನೀತ್ ನೋಡಿಕೊಳ್ಳುತಿದ್ದರು. ಶಿವಣ್ಣನವರ ಪತ್ನಿ ಗೀತಾ ಶಿವರಾಜಕುಮಾರ ಅವರು ಪಾರ್ವತಮ್ಮನವರ ಬಳಿಕ ಆಶ್ರಮದ ಅಧ್ಯಕ್ಷೆಯಾಗಿದ್ದಾರೆ.

ಶಕ್ತಿಧಾಮಕ್ಕೆ ಭೇಟಿ ನೀಡಿ ಇಲ್ಲಿರುವ ಮಕ್ಕಳೊಂದಿಗೆ ಸಮಯ ಕಳೆಯಲು ಹಾಗೂ ಅವರ ಜೊತೆ ಕೂತು ಊಟಮಾಡಲು ಅಪ್ಪು ಇಲ್ಲಿಗೆ ಬರುತ್ತಿದ್ದರಂತೆ. ಮೈಸೂರರಿನ ಪ್ರಸಿದ್ಧ ಹೋಟೆಲ್ಗಳಿಂದ ಊಟ ತರಿಸಿ ಅವರಿಗೆ ಬಡಿಸಿ ತಾವೂ ಅವರೊಂದಿಗೆ ಊಟ ಮಾಡುತ್ತಿದ್ದರು. ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ನಡೆಸಿಕೊಡಲು ಸಿಗುತ್ತಿದ್ದ ಸಂಭಾವನೆಯನ್ನು ಪುನೀತ್ ಆಶ್ರಮಕ್ಕೆ ನೀಡುತ್ತಿದ್ದರು.

ಅವರ ಸಾವಿನ ಸುದ್ದಿ ಕೇಳಿ ದಿಗ್ಭ್ರಾಂತರಾಗಿರುವ ಮಕ್ಕಳು ಶನಿವಾರ ಶ್ರದ್ಧಾಂಜಲಿ ಅರ್ಪಿಸಿದರು.

ಇದನ್ನೂ ಓದಿ:  Puneeth Rajkumar: ಪುನೀತ್​ ಹೃದಯಾಘಾತದ ವೈರಲ್​ ವಿಡಿಯೋ ಅಸಲಿಯೋ ನಕಲಿಯೋ? ಇಲ್ಲಿದೆ ಫ್ಯಾಕ್ಟ್​ ಚೆಕ್​

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​