ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದಾರೆ. ದಾವಣಗೆರೆಯ ಅಪ್ಪಾಜಿ ಎಂದು ಕರೆಸಿಕೊಳ್ಳುತ್ತಿದ್ದ ಇವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಬರುತ್ತಿದ್ದಾರೆ. ವೀರಶೈವ ಲಿಂಗಾಯತ ಧರ್ಮದ ಅಂತಿಮ ಸಂಸ್ಕಾರದ ವಿಧಿ-ವಿಧಾನಗಳು ಹೇಗೆ ನಡೆಯುತ್ತವೆ ಎಂಬುದನ್ನು ದಾರುಕಾ ಶಾಸ್ತ್ರಿಗಳು ವಿವರಿಸಿದ್ದಾರೆ.
ದಾವಣಗೆರೆ, ಡಿಸೆಂಬರ್ 15: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ದಾವಣಗೆರೆಯ ಅಪ್ಪಾಜಿ ಎಂದೇ ಖ್ಯಾತರಾಗಿದ್ದ ಶಾಮನೂರು ಶಿವಶಂಕರಪ್ಪನವರು ಲಿಂಗೈಕ್ಯರಾಗಿದ್ದು, ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕಾಗಿ ಇರಿಸಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಅಂತಿಮ ನಮನ ಸಲ್ಲಿಸಲು ಬರುತ್ತಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪನವರ ಅಂತಿಮ ಸಂಸ್ಕಾರ ಹೇಗೆ ನಡೆಯಲಿದೆ? ವಿಧಿ-ವಿಧಾನಗಳು ಹೇಗಿರಲಿವೆ ಎಂಬ ಕುರಿತು ದಾರುಕಾ ಶಾಸ್ತ್ರಿಗಳು ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ. ವೀರಶೈವ ಲಿಂಗಾಯತ ಧರ್ಮದ ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನಡೆಯಲಿದ್ದು, ವಿವರಗಳು ಇಲ್ಲಿವೆ.
