ದಾವಣಗೆರೆ, ಸೆಪ್ಟೆಂಬರ್ 11: ಸಿಎಂ ಬದಲಾವಣೆ ಪ್ರಸಂಗ ಬಂದರೆ ನಾನು ಕೂಡ ಸ್ಪರ್ಧೆ ಮಾಡುವೆ ಎಂದು ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಜೂನಿಯರ್, ಸೀನಿಯರ್ ಎಂಬ ಪ್ರಶ್ನೆ ಬರುವುದಿಲ್ಲ. ಶಾಸಕರು ಯಾರಿಗೆ ಬಹುಮತ ನೀಡ್ತಾರೋ ಅವರನ್ನು ಹೈಕಮಾಂಡ್ ಒಪ್ಪುತ್ತದೆ. ಸಿಎಂ ಸ್ಥಾನಕ್ಕೆ ನಾನು ಕೂಡ ಸ್ಪರ್ಧೆ ಮಾಡಿಯೇ ತೀರುತ್ತೇನೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಹೈಕಮಾಂಡ್ ಆಶೀರ್ವಾದ ಇರುವ ವರೆಗೂ ಅವರೇ ಸಿಎಂ ಆಗಿರಲಿ. ಕೆಲವರು ಬಾಯಿಗೆ ಬಂದಂತೆ ಮಾತನಾಡುವುದರಿಂದ ಪ್ರಯೋಜನವಿಲ್ಲ. ಹಾಗೆ ಹೇಳಿಕೆ ನೀಡಿದವರೇ ಹಗುರ ಆಗುತ್ತಾರೆ ಎಂದು ಶಾಮನೂರು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:39 pm, Wed, 11 September 24