‘ಗುರು ಶಿಷ್ಯರು’ ಸಿನಿಮಾದ ಹೆಸರು ಮರುಬಳಕೆ ಮಾಡಿಕೊಂಡಿದ್ದು ಯಾಕೆ? ಶರಣ್ ನೀಡಿದ್ರು ಉತ್ತರ
Guru Shishyaru: ‘ಗುರು ಶಿಷ್ಯರು’ ಚಿತ್ರದ ಟೈಟಲ್ ಬಗೆಗಿನ ಒಂದಷ್ಟು ವಿಚಾರಗಳನ್ನು ಶರಣ್ ಅವರು ಈ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಕಥೆ ಬಗ್ಗೆಯೂ ಮಾತನಾಡಿದ್ದಾರೆ.
ಶರಣ್ ಮತ್ತು ನಿಶ್ವಿಕಾ ನಾಯ್ಡು ಅಭಿನಯದ ಗುರು ಶಿಷ್ಯರು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್ 23ರಂದು ಈ ಚಿತ್ರ ಎಲ್ಲೆಡೆ ತೆರೆಕಾಣಲಿದೆ. ಶೀರ್ಷಿಕೆಯಿಂದಲೇ ಈ ಸಿನಿಮಾ ಗಮನ ಸೆಳೆಯುತ್ತಿದೆ. ಅಷ್ಟಕ್ಕೂ ‘ಗುರು ಶಿಷ್ಯರು’ (Guru Shishyaru) ಎಂದು ಹಳೇ ಸಿನಿಮಾದ ಶೀರ್ಷಿಕೆಯನ್ನೇ ಮರುಬಳಕೆ ಮಾಡಿಕೊಂಡಿದ್ದು ಯಾಕೆ ಎಂಬ ಪ್ರಶ್ನೆ ಮೂಡುವುದು ಸಹಜ. ಅದಕ್ಕೆ ಚಿತ್ರದ ನಾಯಕ ಶರಣ್ (Sharan) ಅವರು ಉತ್ತರ ನೀಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕನ ನಡುವಿನ ಕಥೆ ಇದರಲ್ಲಿ ಇದೆ. ಟೈಟಲ್ ಬಗೆಗಿನ ಒಂದಷ್ಟು ವಿಚಾರಗಳನ್ನು ಅವರು ಈ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:48 pm, Thu, 22 September 22
Latest Videos