Karnataka Budget Session: ವಜುಭಾಯಿ ವಾಲಾರ ದಾಖಲೆಯನ್ನು ಸಿದ್ದರಾಮಯ್ಯ ಮುರಿಯಲಿ ಎಂದ ಶರಣಗೌಡ ಕಂದ್ಕೂರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 20, 2025 | 10:29 AM

ಶರಣಗೌಡ ಕಂದ್ಕೂರ್ ತಾನು ಗ್ಯಾರಂಟಿ ಯೋಜನೆಗಳ ವಿರೋಧಿ ಅಲ್ಲವೆನ್ನುತ್ತಾರೆ, ಮಹಿಳೆಯರಿಗೆ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಸ್ತ್ರೀಯರಿಗೆ ಸ್ವಾವಲಂಬಿ ಬದುಕು ನಡೆಸಲು ಉತ್ತೇಜನ ನೀಡುವ ಯೋಜನೆಗಳನ್ನು ಜಾರಿಗೆ ತರುವ ಪ್ರಯತ್ನ ನಡೆಯಬೇಕು ಎಂದು ಹೇಳುತ್ತಾರೆ. ಸಿದ್ದರಾಮಯ್ಯ ಬಗ್ಗೆ ಅವರು ಒಲವು ಪ್ರಕಟಿಸುವುದು ವ್ಯಂಗ್ಯದ ಧಾಟಿಯಲ್ಲೋ ಅಂತ ಗೊತ್ತಾಗಲ್ಲ,

ಬೆಂಗಳೂರು, 19 ಮಾರ್ಚ್: ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದ್ಕೂರ್ ಇಂದು ಸದನದಲ್ಲಿ ಮಾತಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ 19 ಬಾರಿ ಬಜೆಟ್ ಮಂಡಿಸಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳಲಿ ಎನ್ನುತ್ತಾರೆ.  ವಜುಭಾಯಿ ವಾಲಾ ಕರ್ನಾಟಕದ ರಾಜ್ಯಪಾಲರಾಗುವ ಮೊದಲು ಗುಜರಾತ್ ರಾಜ್ಯದ ಹಣಕಾಸು ಸಚಿವರಾಗಿ ದಾಖಲೆಯ 18 ಬಾರಿ ಬಜೆಟ್ ಮಂಡಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Assembly Session; ಅಗತ್ಯ ಬಿದ್ದರೆ ಗುರುಮಠಕಲ ಸಿಪಿಐನನ್ನು ಕೆಲಸದಿಂದ ಡಿಸ್ಮಿಸ್ ಮಾಡುತ್ತೇನೆ: ಜಿ ಪರಮೇಶ್ವರ್

Published on: Mar 19, 2025 01:11 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.