ತುಮಕೂರಿನಲ್ಲಿ ಗೋಧಿ ಲಾರಿ ಪಲ್ಟಿ; ರೋಡಿಗೆ ಬಿದ್ದ ಗೋಧಿ ಬಾಚಲು ಮುಗಿಬಿದ್ದ ಜನ
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹುಳಿಯಾರು ರಸ್ತೆಯ ಹುಯಿಲ್ ದೊರೆ ಸೇತುವೆ ಬಳಿ ಗೋಧಿ ತುಂಬಿದ ಲಾರಿ ಪಲ್ಟಿಯಾಗಿದೆ. ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗೋಧಿ ರಸ್ತೆ ತುಂಬ ಚೆಲ್ಲಿದೆ. ಅಪಘಾತದ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಚೀಲಗಳೊಂದಿಗೆ ಬಂದು ಲಾರಿಯಿಂದ ಬಿದ್ದ ಗೋಧಿಯನ್ನು ಬಾಚಿಕೊಂಡಿದ್ದಾರೆ. ಕೆಲವರಂತೂ ಗೋಧಿಯನ್ನು ಬಾಚಿ ಚೀಲದಲ್ಲಿ ತುಂಬಿಕೊಂಡು ಹೋಗಿದ್ದಾರೆ. ಈ ಘಟನೆ ಶಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಇಲ್ಲಿವೆ.
ತುಮಕೂರು, ನವೆಂಬರ್ 17: ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹುಳಿಯಾರು ರಸ್ತೆಯ ಹುಯಿಲ್ ದೊರೆ ಸೇತುವೆ ಬಳಿ ಗೋಧಿ ತುಂಬಿದ ಲಾರಿ ಪಲ್ಟಿಯಾಗಿದೆ. ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗೋಧಿ ರಸ್ತೆ ತುಂಬ ಚೆಲ್ಲಿದೆ. ಅಪಘಾತದ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಚೀಲಗಳೊಂದಿಗೆ ಬಂದು ಲಾರಿಯಿಂದ ಬಿದ್ದ ಗೋಧಿಯನ್ನು ಬಾಚಿಕೊಂಡಿದ್ದಾರೆ. ಕೆಲವರಂತೂ ಗೋಧಿಯನ್ನು ಬಾಚಿ ಚೀಲದಲ್ಲಿ ತುಂಬಿಕೊಂಡು ಹೋಗಿದ್ದಾರೆ. ಈ ಘಟನೆ ಶಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೃಶ್ಯಾವಳಿ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

