ಶಿರೂರು ಗುಡ್ಡ ಕುಸಿತ: ಪರಿಹಾರದ ಪ್ರಶ್ನೆ ಬಂದಾಗ ನುಣುಚಿಕೊಳ್ಳುವ ಪ್ರಯತ್ನ ಮಾಡಿದ ಕುಮಾರಸ್ವಾಮಿ

ಇಂಥ ಸಂದರ್ಭಗಳಲ್ಲಿ ರಾಜ್ಯದ ಜವಾಬ್ದಾರಿ ಏನು ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಪರಿಹಾರಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಮನವಿ ಸಲ್ಲಿಸುವುದಾಗಿ ಹೇಳಿದರು. ಅದು ಸರಿ, ಅದರೆ ಕುಮಾರಸ್ವಾಮಿಯವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅವೈಜ್ಞಾನಿಕ ಕಾಮಗಾರಿಯನ್ನು ಒಪ್ಪಿಕೊಳ್ಳದಿರುವುದು ಕನ್ನಡಿಗರಲ್ಲಿ ಖಂಡಿತವಾಗಿ ಅಚ್ಚರಿ ಮೂಡಿಸುತ್ತದೆ.

ಶಿರೂರು ಗುಡ್ಡ ಕುಸಿತ: ಪರಿಹಾರದ ಪ್ರಶ್ನೆ ಬಂದಾಗ ನುಣುಚಿಕೊಳ್ಳುವ ಪ್ರಯತ್ನ ಮಾಡಿದ ಕುಮಾರಸ್ವಾಮಿ
|

Updated on: Jul 20, 2024 | 6:23 PM

ಕಾರವಾರ: ಶಿರೂರು ಬಳಿ ಗುಡ್ಡ ಕುಸಿದು ಅನಾಹುತ ನಡೆದಿರುವ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ದುರ್ಘಟನೆಗೆ ರಾಷ್ಟ್ರೀಯ ಅಭಿವೃದ್ಧಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿ ಕಾರಣವಾಗಿದ್ದರೂ ಅದನ್ನು ಒಪ್ಪಿಕೊಳ್ಳುವ ಉದಾರತೆ ಪ್ರದರ್ಶಿಸಲಿಲ್ಲ. ಅನಾಹುತಕ್ಕೆ ಕೇಂದ್ರ ಸರ್ಕಾರ ಹೊಣೆಯೋ ಅಥವಾ ರಾಜ್ಯ ಸರ್ಕಾರ ಹೊಣೆಯೋ ಆಮೇಲೆ ಚರ್ಚಿಸೋಣ ಅಂತ ಪತ್ರಕರ್ತರ ಪ್ರಶ್ನೆಯಿಂದ ನುಣುಚಿಕೊಳ್ಳುವ ಪ್ರಯತ್ನವನ್ನು ಅವರು ಮಾಡಿದರು. ಡಿಕೆ ಶಿವಕುಮಾರ್ ಬರೀ ಭೇಟಿ ನೀಡಿದರೆ ಸಾಲಲ್ಲ, ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಕೊಡಿಸಬೇಕು ಅಂತ ಹೇಳಿದ್ದಾರೆ ಅಂತ ಹೇಳಿದ್ದ`qಕ್ಕೆ ಕುಮಾರಸ್ವಾಮಿ, ಅದೆಲ್ಲ ಹಾಗಾಗಲ್ಲ, ಅದಕ್ಕೆ ಕೆಲ ನಿಯಮಾವಳಿಗಳಿವೆ ಅವುಗಳನ್ನು ಪಾಲಿಸಬೇಕಾಗುತ್ತದೆ ಎನ್ನುತ್ತಾರೆ. ಎಲ್ಲಕ್ಕೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ರಾಜ್ಯ ಸರ್ಕಾರಕ್ಕೆ ಅಭ್ಯಾಸವಾಗಿದೆ ಎಂದ ಕುಮಾರಸ್ವಾಮಿ 2018ರಲ್ಲಿ ತಾನು ಮುಖ್ಯಮಂತ್ರಿಯಾಗಿದ್ದಾಗ ಪರಿಹಾರ ನೀಡಿದ್ದೆ, ಕೇಂದ್ರದ ನೆರವಿಗಾಗಿ ಕಾದಿರಲಿಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಿಜೆಪಿ ಸರ್ಕಾರದ ಹಗರಣಗಳನ್ನು ತನಿಖೆ ಮಾಡಿಸುವೆನೆನ್ನುವ ಸಿದ್ದರಾಮಯ್ಯ ಇಷ್ಟು ದಿನ ಕಾದಿದ್ದೇಕೆ? ಕುಮಾರಸ್ವಾಮಿ

Follow us
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ