ಶಿರೂರು ಗುಡ್ಡ ಕುಸಿತ: ಗಂಗಾವಳಿ ನದಿಯಲ್ಲಿ ತೇಲಿಬಂತು ಅರ್ಜುನ್ ಟ್ರಕ್​ನಲ್ಲಿದ್ದ ಮರದ ತುಂಡು

ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ನಿನ್ನೆ (ಬುಧವಾರ) ಗಂಗಾವಳಿ ನದಿಯಲ್ಲಿ ಇರುವುದು ತಿಳಿದಿತ್ತು. ಇಂದು(ಜು.25)) ಗಂಗಾವಳಿ ನದಿಯಲ್ಲಿ ಅರ್ಜುನ್ ಟ್ರಕ್​ನಲ್ಲಿದ್ದ ಅಕೇಶಿಯ ಮರದ ತುಂಡೊಂದು ಪತ್ತೆಯಾಗಿದೆ. ಈ ಮೂಲಕ ಲಾರಿ ನದಿಯಲ್ಲಿಯೇ ಇರುವುದು ಖಚಿತವಾಗಿದೆ.

ಶಿರೂರು ಗುಡ್ಡ ಕುಸಿತ: ಗಂಗಾವಳಿ ನದಿಯಲ್ಲಿ ತೇಲಿಬಂತು ಅರ್ಜುನ್ ಟ್ರಕ್​ನಲ್ಲಿದ್ದ ಮರದ ತುಂಡು
|

Updated on: Jul 25, 2024 | 5:54 PM

ಉತ್ತರ ಕನ್ನಡ, ಜು.25: ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ ನಿನ್ನೆ (ಬುಧವಾರ) ಗಂಗಾವಳಿ ನದಿಯಲ್ಲಿ ಬೂಮ್ ಫೋಕ್ಲೇನ್ ಮೂಲಕ ಕಾರ್ಯಾಚರಣೆ ನಡೆಸಿದ್ದ ವೇಳೆ ಫೋಕ್ಲೇನ್ ಬಕೆಟ್​ಗೆ ಕಬ್ಬಿಣ ಬಡಿದಿತ್ತು. ಈ ಹಿನ್ನಲೆ ನದಿಯಲ್ಲಿ ವಾಹನ ಇದೆ ಎನ್ನಲಾಗಿತ್ತು. ಇಂದು(ಜು.25)) ಗಂಗಾವಳಿ ನದಿಯಲ್ಲಿ ಅರ್ಜುನ್ ಟ್ರಕ್​ನಲ್ಲಿದ್ದ ಅಕೇಶಿಯ ಮರದ ತುಂಡೊಂದು ಪತ್ತೆಯಾಗಿದೆ. ಈ ಮೂಲಕ ಲಾರಿ ನದಿಯಲ್ಲಿಯೇ ಇರುವುದು ಖಚಿತವಾಗಿದೆ.

12 ಕಿಲೋಮೀಟರ್ ದೂರದಲ್ಲಿ ದೊರೆತ ಟ್ರಕ್​ನಲ್ಲಿದ್ದ ಅಕೇಶಿಯ ತುಂಡು

ಶಿರೂರಿನ ಗಂಗಾವಳಿ ನದಿಯಲ್ಲಿ ತೇಲಿ ಬಂದು 12 ಕಿಲೋಮೀಟರ್ ದೂರದಲ್ಲಿ ಟ್ರಕ್​ನಲ್ಲಿದ್ದ ಅಕೇಶಿಯ ತುಂಡು ದೊರೆತಿದೆ. ನದಿ ನೀರಿನಲ್ಲಿ ತೇಲಿಬಂದ ಅಕೇಶಿಯ ತುಂಡನ್ನ ಗಂಗಾವಳಿ ನದಿ ತೀರ ಪ್ರದೇಶದ ಜನ, ತೆಗೆದುಕೊಂಡು ಮನೆಗೆ ಕೊಂಡೊಯ್ದಿದ್ದರು. ತೇಲಿಬಂದ ಅಕೇಶಿಯ ತುಂಡಲ್ಲಿ ಅರಣ್ಯ ಇಲಾಖೆಯ ಮಾರ್ಕ್​ ಇರುವುದರಿಂದ ಸ್ಥಳಕ್ಕೆ ಕಾಣೆಯಾದ ಟ್ರಕ್ ಚಾಲಕ ಅರ್ಜುನ್ ಕಡೆಯ ಟ್ರಕ್ ಮಾಲೀಕರು ತೆರಳಿ ದೃಢಪಡಿಸಿದ್ದಾರೆ.

ಲಾರಿ ರೀತಿಯ ವಸ್ತು ಇದೆ ಎಂದು ಖಚಿತಪಡಿಸಿದ ಡ್ರೋನ್

ಇನ್ನು ಬೆಳಗ್ಗೆಯಿಂದ ಕೇರಳ ಮೂಲದ ಮೇಜರ್ ಜನರಲ್ ಇಂದ್ರಬಾಲನ್ ನೇತೃತ್ವದಲ್ಲಿ ನಿರಂತರವಾಗಿ ಡ್ರೋನ್ ಮೂಲಕ ಕಾರ್ಯಾಚರಣೆ ಮಾಡಲಾಗಿತ್ತು. ಇದೀಗ ಇಂದಿನ ಡ್ರೋನ್ ಕಾರ್ಯಾಚರಣೆ ಮುಕ್ತಾಯವಾಗಿದ್ದು,  ನಿನ್ನೆ ನೌಕಾ ದಳ, ಸೇನೆ ಮಾಹಿತಿ ನೀಡಿದಂತೆ ನದಿಯಲ್ಲಿ ಲಾರಿ ರೀತಿಯ ವಸ್ತು ಇದೆ ಎಂದು ಡ್ರೋನ್ ಖಚಿತಪಡಿಸಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್