ಅಹಂಕಾರ ಬರಬಾರದು, ನಮ್ಮ ತಲೆ ನಮ್ಮ ಭುಜದ ಮೇಲೇ ಇರಬೇಕು: ಹೀಗೇಕೆ ಹೇಳಿದರು ಶಿವಣ್ಣ

Updated on: Jan 13, 2024 | 10:58 PM

Shiva Rajkumar: ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಿದ ಶಿವರಾಜ್ ಕುಮಾರ್, ನಟರಿಗೆ ಅಹಂಕಾರ ಬರಬಾರದು, ನಮ್ಮ ತಲೆ ನಮ್ಮ ಭುಜದ ಮೇಲೇ ಇರಬೇಕು ಎಂದಿದ್ದು ಏಕೆ?

ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ (Upadyaksha) ಸಿನಿಮಾದ ಟ್ರೈಲರ್ ಅನ್ನು ಶಿವರಾಜ್ ಕುಮಾರ್ (Shiva Rajkumar) ಇಂದು (ಜನವರಿ 13) ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಹಲವು ವಿಷಯಗಳ ಬಗ್ಗೆ ಎಂದಿನ ಉತ್ಸಾಹದಲ್ಲಿಯೇ ಶಿವರಾಜ್ ಕುಮಾರ್ ಮಾತನಾಡಿದರು. ಚಿಕ್ಕಣ್ಣನ ಪ್ರತಿಭೆ ಬಗ್ಗೆ, ಕನ್ನಡ ಸಿನಿಮಾದ ಹಿರಿಮೆಯ ಬಗ್ಗೆ ಮಾತನಾಡಿದರು. ಇದೇ ಸಮಯದಲ್ಲಿ ನಟರಿಗೆ ಅಹಂಕಾರ ಬರಬಾರದು, ಅವರು ತಮ್ಮ ಜವಾಬ್ದಾರಿಯನ್ನು ಸೂಕ್ತವಾಗಿ ನಿಭಾಯಿಸಲೇ ಬೇಕು ಎಂದರು. ಅಲ್ಲಿಯೇ ಇದ್ದ ನಟ ರವಿಶಂಕರ್ ಅವರು ಕಡ್ಡಾಯವಾಗಿ ಸಿನಿಮಾದ ಪ್ರಚಾರಕ್ಕೆ ಬರಬೇಕೆಂದು ಆಗ್ರಹಿಸಿ ಈ ಮೇಲಿನ ಮಾತುಗಳನ್ನು ಶಿವಣ್ಣ ಹೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More