AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು: ಪೂರ್ವ ಮಾಹಿತಿ ಇಲ್ಲದೆ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ

ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು: ಪೂರ್ವ ಮಾಹಿತಿ ಇಲ್ಲದೆ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Jul 21, 2026 | 3:35 PM

Share

Footpath Encroachment Drive: ಶಿವಾಜಿನಗರದಲ್ಲಿ ನಡೆದ ಫುಟ್​ಪಾತ್ ತೆರವು ಕಾರ್ಯಾಚರಣೆ ವೇಳೆ ವ್ಯಾಪಾರಿಗಳಿಗೆ ಯಾವುದೇ ಮುನ್ಸೂಚನೆ ನೀಡಿಲ್ಲ. ಏಕಾಏಕಿ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ವ್ಯಾಪಾರದ ವಸ್ತುಗಳು ಹಾಳಾಗಿವೆ. ದಶಕಗಳಿಂದ ವ್ಯಾಪಾರ ನಡೆಸುತ್ತಿದ್ದವರಿಗೆ ನ್ಯಾಯ ಸಿಗದೇ, ಜೀವನೋಪಾಯಕ್ಕೆ ಸಂಕಷ್ಟ ಎದುರಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಜುಲೈ 21: ಶಿವಾಜಿನಗರದಲ್ಲಿ ನಡೆದ ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚಾರಣೆ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಜಿಬಿಎ ಸಿಬ್ಬಂದಿ ಮೇಲೆ ದಾಳಿ ನಡೆಸಿರುವ ಆರೋಪದ ಹಿನ್ನೆಲೆ ಹಲವರನ್ನು ವಶಕ್ಕೆ ಪಡೆದಿರುವ ನಡುವೆ ಅಧಿಕಾರಿಗಳ ವಿರುದ್ಧವೇ ವ್ಯಾಪಾರಿಗಳು ಗಂಭೀರ ಆರೋಪ ಮಾಡಿದ್ದಾರೆ. ನಮಗೆ ಒಂದು ನಿಮಿಷದ ಸಮಯವನ್ನೂ ನೀಡಿಲ್ಲ. ನಮ್ಮ ಫ್ರಿಡ್ಜ್, ಶೋಕೇಸ್ ಮತ್ತು ಇತರೆ ವ್ಯಾಪಾರದ ವಸ್ತುಗಳು ಸಂಪೂರ್ಣ ಪುಡಿಪುಡಿಯಾಗಿ ಹಾಳಾಗಿವೆ ಎಂದು ದೂರಿದ್ದಾರೆ. ಅರ್ಧ ಗಂಟೆ ಕಾಲಾವಕಾಶವನ್ನೂ ನೀಡದೆ ಬುಲ್ಡೋಜರ್ ಹಾಕಿ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ತಮ್ಮ ಜೀವ ಉಳಿಸಿಕೊಳ್ಳಲು ಸ್ಥಳದಿಂದ ಹೊರ ಓಡಿ ಬಂದಿದ್ದೇವೆ ಎಂದವರು ದೂರಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us