AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ಧತೆಗಳ ಪರಿಶೀಲನೆಗೆ ನಾನು ಮತ್ತು ಶಿವಕುಮಾರ್ ನಾಳೆ ವಿಜಯನಗರಕ್ಕೆ ಹೋಗುತ್ತಿದ್ದೇವೆ: ಸಿದ್ದರಾಮಯ್ಯ

ಸಿದ್ಧತೆಗಳ ಪರಿಶೀಲನೆಗೆ ನಾನು ಮತ್ತು ಶಿವಕುಮಾರ್ ನಾಳೆ ವಿಜಯನಗರಕ್ಕೆ ಹೋಗುತ್ತಿದ್ದೇವೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: May 15, 2025 | 6:34 PM

Share

ಮಂಡಿನೋವಿನ ಸಮಸ್ಯೆಯಿಂದ ಬಳಲಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡಿಗೆ ಶೈಲಿ ಬದಲಾಗಿದೆ. ಮೊದಲಿನ ಹಾಗೆ ಅವರು ಠಾಕುಠೀಕಾಗಿ ನಡೆಯುತ್ತಿಲ್ಲ, ನಿಧಾನಕ್ಕೆ ನಡೆಯುತ್ತಿದ್ದಾರೆ. ಮೆಟ್ಟಿಲುಗಳನ್ನು ಇಳಿಯುವಾಗ ಹೆಚ್ಚಿನ ಜಾಗ್ರತೆ ವಹಿಸುತ್ತಿದ್ದಾರೆ. ವಿಧಾನ ಸೌಧದ ಬಳಿ ನಾಲ್ಕೈದು ಮೆಟ್ಟಿಲುಗಳನ್ನು ಅವರು ಇಳಿಯುವ ವಿಧಾನ ನೋಡಿದರೆ ವಿಷಯ ಗೊತ್ತಾಗುತ್ತದೆ.

ಬೆಂಗಳೂರು, ಮೇ 15: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ (Congress Government) ಮೇ 20 ತನ್ನ ಆಧಿಕಾರದ 2ವರ್ಷಗಳನ್ನು ಪೂರೈಸಲಿದ್ದು ಇದೇ ಹಿನ್ನೆಲೆ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಏರ್ಪಡಿಸಲಾಗಿದೆ. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇಂದು ವಿಧಾನ ಸೌಧದಿಂದ ಹೊರಬರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಜಯನಗರಕ್ಕೆ ಭೇಟಿ ನೀಡ್ತಾ ಇದ್ದೀರಾ ಅಂತ ಕೇಳಿದ್ದಕ್ಕೆ ಅವರು, ಹೌದು ನಾಳೆ ವಿಜಯನಗರಕ್ಕೆ ಹೋಗ್ತಾ ಇದ್ದೀನಿ, ಸಿದ್ಧತೆಗಳು ಹೇಗೆ ನಡೆದಿವೆ ಅಂತ ಪರಿಶೀಲನೆ ನಡೆಸಲು ಹೋಗುತ್ತಿರುವೆ, ಡಿಕೆ ಶಿವಕುಮಾರ್ ಸಹ ಬರುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:   ಅಧಿವೇಶನದಲ್ಲಿ ಭಾಗವಹಿಸಲು ವ್ಹೀಲ್ ಚೇರ್​​ನಲ್ಲಿ ಮಧ್ಯಾಹ್ನದ ವೇಳೆ ಅಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ