ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಗೋಷ್ಠಿ ನಡೆಸಿ ಮಾತಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಿನ್ನೆಯ ತಮ್ಮ ಟ್ವೀಟ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿರುವುದಕ್ಕೆ ಉತ್ತರಿಸಿದರು. ಬೆಂಗಳೂರು ನಗರದ ಅಭಿವೃದ್ಧಿಯ ನೆಪದಲ್ಲಿ ಮನಸ್ಸಿಗೆ ಮುದ ನೀಡುವ ಹೆಸರುಗಳನ್ನು ನೀಡುವುದನ್ನು ಬಿಟ್ಟರೆ ಉಪ ಮುಖ್ಯಮಂತ್ರಿಯಿಂದ ಯಾವುದೇ ಕೆಲಸವಾಗಿಲ್ಲ, ರಾಜ್ಯದ ಹೆಸರಿಗೆ ಅಗೌರವ ತರುವ ಕೆಲಸವನ್ನು ವಿರೋಧ ಪಕ್ಷದ ನಾಯಕರು ಮಾಡುತ್ತಿಲ್ಲ, ತನ್ನ ನಿಷ್ಕ್ರಿಯತೆಯಿಂದ ರಾಜ್ಯ ಸರ್ಕಾರ ಆ ಕೆಲಸದಲ್ಲಿ ತೊಡಗಿದೆ ಎಂದು ಕುಮಾರಸ್ವಾಮಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕುಮಾರಸ್ವಾಮಿ ಟ್ವೀಟ್ಗೆ ಉತ್ತರಿಸಲಾಗದೆ ವಿತಂಡವಾದಕ್ಕಿಳಿದ ಡಿಸಿಎಂ ಶಿವಕುಮಾರ್