ಅಭ್ಯರ್ಥಿ ಯಾರೆಂದು ಕಾರ್ಯಕರ್ತರೊಂದಿಗೆ ಚರ್ಚಿಸಲು ಚನ್ನಪಟ್ಟಣಕ್ಕೆ ಹೊರಟ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Oct 19, 2024 | 12:13 PM

ಫಾರ್ ಎ ಚೇಂಜ್ ಚನ್ನಟ್ಟಣ ಕ್ಷೇತ್ರದ ಅಭ್ಯರ್ಥಿ ತಾನೇ ಎಂದು ಶಿವಕುಮಾರ್ ಇವತ್ತು ಹೇಳಲಿಲ್ಲ. ಅವರು ಸ್ಪರ್ಧಿಸುವುದಿಲ್ಲವೆಂದು ಎಲ್ಲರಿಗೂ ಗೊತ್ತು, ಅದರೆ ವಿರೋಧ ಪಕ್ಷದ ನಾಯಕರನ್ನು ಗೊಂದಲದಲ್ಲಿಡಲು ಅವರು ಮಾಧ್ಯಮ ಕೇಳಿದಾಗೆಲ್ಲ ತಾನೇ ಅಭ್ಯರ್ಥಿ ಎನ್ನುತ್ತಿದ್ದರು.

ಬೆಂಗಳೂರು: ಇಂದು ಬೆಳಗ್ಗೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚನ್ನಪಟ್ಟಣದ ಕಡೆ ಹೊರಟರು. ನವೆಂಬರ್ 13 ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು ಪಕ್ಷದ ಕಾರ್ಯಕರ್ತರ ಜೊತೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಸುವುದು ರಾಜ್ಯಾಧ್ಯಕ್ಷನಾಗಿ ತಮ್ಮ ಜವಾಬ್ದಾರಿಯಾಗಿದೆ ಎಂದು ಶಿವಕುಮಾರ್ ಹೇಳಿದರು. ಇವತ್ತು ಸಾಯಂಕಾಲ ಅಥವಾ ನಾಳೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಿಸುವ ನಿರೀಕ್ಷೆ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಯೋಗೇಶ್ವರ್​ಗೆ ಶಿವಕುಮಾರ್ ಗಾಳ?

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.