ಅಕ್ರಮ ಹಣ, ಆಸ್ತಿ ಪ್ರಕರಣದಲ್ಲಿ ಶಿವಕುಮಾರ ಇನ್ನೂ ನಿರ್ದೋಷಿಯಲ್ಲ, ಜಾಮೀನು ಮೇಲೆ ಹೊರಗಿದ್ದಾರೆ ಅಷ್ಟೇ: ಕೆ ಎಸ್ ಈಶ್ವರಪ್ಪ
ಆದಾಯಕ್ಕೆ ಮೀರಿದ ಪ್ರಕರಣದಲ್ಲಿ ನಿರ್ದೋಷಿ ಅನ್ನೋದು ಇನ್ನೂ ಸಾಬೀತಾಗಿಲ್ಲ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ, ಅವರ ಮನೆ ಮೇಲೆ ದಾಳಿ ನಡೆದಾಗ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಹಣ ಸಿಕ್ಕಿದ್ದನ್ನು ಜನರೆಲ್ಲ ನೋಡಿದ್ದಾರೆ ಅಂತ ಈಶ್ವರಪ್ಪ ಹೇಳಿದರು.
ಶಿವಮೊಗ್ಗ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗೋಷ್ಟಿಯೊಂದನ್ನು ನಡೆಸಿ ತಿಹಾರ್ ಜೈಲಿಗೆ ಹೋಗಿದ್ದ ಡಿಕೆ ಶಿವಕುಮಾರ (DK Shivakumar) ಆದಾಯಕ್ಕೆ ಮೀರಿದ ಪ್ರಕರಣದಲ್ಲಿ ನಿರ್ದೋಷಿ ಅನ್ನೋದು ಇನ್ನೂ ಸಾಬೀತಾಗಿಲ್ಲ ಅವರು ಜಾಮೀನಿನ (Bail) ಮೇಲೆ ಹೊರಗಿದ್ದಾರೆ ಅಂತ ಹೇಳಿದರು. ಅವರ ಮನೆ ಮೇಲೆ ದಾಳಿ ನಡೆದಾಗ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಹಣ ಸಿಕ್ಕಿದ್ದನ್ನು ಜನರೆಲ್ಲ ನೋಡಿದ್ದಾರೆ. ಆ ಹಣ ಎಲ್ಲಿಂದ ಬಂತು, ನ್ಯಾಶನಲ್ ಹೆರಾಲ್ಡ್ (National Herald) ಪತ್ರಿಕೆಗೆ ಅವರು ಮತ್ತು ಅವರ ಸಹೋದರ ಡಿಕೆ ಸುರೇಶ ನೀಡಿದ ದೇಣಿಗೆ ಮೊದಲಾದ ಸಂಗತಿಗಳನ್ನು ಶಿವಕುಮಾರ ಸ್ಪಷ್ಟಪಡಿಸಬೇಕು ಎಂದು ಈಶ್ವರಪ್ಪ ಹೇಳಿದರು.
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

