ಬೆಳಗಾವಿ ಅಧಿವೇಶನ: ಸದನದಲ್ಲಿ ಪ್ರಶ್ನೆ ಕೇಳಲು ಹಳೇದೋಸ್ತಿ ಶಿವಲಿಂಗೇಗೌಡ ಮತ್ತು ರೇವಣ್ಣ ನಡುವೆ ಜಟಾಪಟಿ!

ಅರುಣ್​ ಕುಮಾರ್​ ಬೆಳ್ಳಿ

Updated on: Dec 05, 2023 | 3:50 PM

ಕಳೆದ ವಾರ ಹೆಚ್ ಡಿ ರೇವಣ್ಣ ಅವರು ತೆಂಗಿನಕಾಯಿ ಬೆಳೆಗಾರರೊಂದಿಗೆ ಕೈಯಲ್ಲಿ ಕೊಬ್ಬರಿ ಚೀಲ ಹಿಡಿದುಕೊಂಡು ಬಂದು ಹಾಸನ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ, ಬೆಂಬಲ ಬೆಲೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ ಮನವಿ ಪತ್ರವನ್ನು ಡಿಸಿಗೆ ನೀಡಿದ್ದರು. ಅವರ ಕಾಳಜಿ ಅರ್ಥವಾಗುವಂಥದ್ದೇ, ಆದರೆ ಕಲಾಪ ನಡೆಯುವಾಗ ಸದನದ ನಿಯಮಾವಳಿ ಪಾಲಿಸಬೇಕಾಗುತ್ತದೆ.

ಬೆಳಗಾವಿ: ವಿಧಾನಮಂಡಲದ ಇಂದಿನ ಕಾರ್ಯಕಲಾಪದಲ್ಲಿ ಇಬ್ಬರು ಗೌಡರ ನಡುವೆ ಜಟಾಪಟಿ ನಡೆಯಿತು. ಕಾಂಗ್ರೆಸ್ ಶಾಸಕ ಕೆಎಂ ಶಿವಲಿಂಗೇಗೌಡ (KM Shivalinge Gowda) ಮತ್ತು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ (HD Revanna) ಒಂದುkAಲತ್ತಿಲ್ ಆಪ್ತಮಿತ್ರರು. ಆದರೆ ಅರಸೀಕೆರೆ ಶಾಸಕರೀಗ ಕೈ ಪಾರ್ಟಿ. ವಿಷಯವೇನೆಂದರೆ, ಇಬ್ಬರಿಗೂ ಕೊಬ್ಬರಿಗೆ ಬೆಂಬಲ (MSP) ನೀಡಲು ಸರ್ಕಾರದ ಗಮನ ಸೆಳಯುವ ಕಾತುರ. ತಮ್ಮ ಕ್ಷೇತ್ರದ ಜನರ ಮತ್ತು ತೆಂಗಿನಕಾಯಿ ಬೆಳೆಗಾರರ ಕ್ರೆಡಿಟ್ ಪಡೆದುಕೊಳ್ಳುವ ಹವಣಿಕೆ ಇದ್ದಿರಬಹುದು. ಶಿವಲಿಂಗೇಗೌಡರು ಮಾತಾಡಲು ಮೇಲೇಳುತ್ತಿದ್ದಂತೆ ರೇವಣ್ಣ ಸಹ ಮೇಲೆದ್ದು ಸಭಾಧ್ಯಕ್ಷರೇ ಸಭಾಧ್ಯಕ್ಷರೇ ಅನ್ನುತ್ತಾರೆ. ತನಗೆ ಮಾತಾಡಲು ನೀಡಿರುವ ಅವಕಾಶವನ್ನು ರೇವಣ್ಣ ಕಸಿದುಕೊಳ್ಳುವ ಪ್ರಯತ್ನಮಾಡಿದ್ದು ಗೌಡರಿಗೆ ರೇಗುತ್ತದೆ ಮತ್ತು ರೇವಣ್ಣ ಮೇಲೆ ಹರಿಹಾಯಲಾರಂಭಿಸುತ್ತಾರೆ. ರೇವಣ್ಣ ತಮ್ಮ ಮಾತು ನಿಲ್ಲಿಸದಾದಾಗ ಸಭಾಧ್ಯಕ್ಷ ಯುಟಿ ಖಾದರ್ ಮಧ್ಯಪ್ರವೇಶಿಸಿ, ಶೂನ್ಯ ವೇಳೆಯಲ್ಲಿ ಪ್ರಶ್ನೆ ಕೇಳಲು ಶಿವಲಿಂಗೇಗೌಡರು ಸೋಮವಾರ ಬೆಳಗ್ಗೆಯೇ ಹೆಸರು ಬರೆಸಿದ್ದಾರೆ, ರೇವಣ್ಣ ಸ್ವಲ್ಪ ಹೊತ್ತಿಗೆ ಮುಂಚೆಗಷ್ಟೇ ಬರೆಸಿರೋದು, ಹಾಗಾಗಿ ಶಿವಲಿಂಗೇಗೌಡರು ಮಾತಾಡುವಾಗ ಅಡ್ಡಿ ಮಾಡಬೇಡಿ ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.