Karnataka Assembly Polls: ಶಿವಲಿಂಗಗೌಡ ಜೆಡಿಎಸ್ ಸಾಕಿದ ಮುದ್ದಿನ ಗಿಣಿ, ಈಗ ಬೇರೆಡೆ ಮೇಯಲು ಹೋಗಿದ್ದಾರೆ: ಹೆಚ್ ಡಿ ರೇವಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: May 08, 2023 | 11:13 AM

ಪಕ್ಷ ನೀಡಿದ ಎಲ್ಲ ಸವಲತ್ತುಗಳನ್ನು ಅನುಭವಿಸಿ ಚುನಾವಣೆ ಹತ್ತಿರ ಬಂದಾಗ ಜೆಡಿಎಸ್ ಗೆ ದ್ರೋಹ ಬಗೆದು ಕಾಂಗ್ರೆಸ್ ಸೇರಿದ್ದಾರೆ ಎಂದು ರೇವಣ್ಣ ಹೇಳಿದರು.

ಹಾಸನ: ಮತದಾನಕ್ಕೆ ಕೇವಲ ಎರಡು ದಿನ ಮಾತ್ರ ಉಳಿದಿದ್ದರೂ ಜೆಡಿಎಸ್ ಪಕ್ಷದ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ (HD Revanna) ಅವರು ಪಕ್ಷ ತೊರೆದು ಅರಸೀಕೆರೆ ಕ್ಷೇತ್ರದಿಂದ (Arasikere constituency) ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಂ ಶಿವಲಿಂಗೇಗೌಡರ (KM Shivalinge Gowda) ವಿರುದ್ಧ ಕಿಡಿಕಾರುವುದನ್ನು ನಿಲ್ಲಿಸಿಲ್ಲ. ಹಾಸನದಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ರೇವಣ್ಚ, ಶಿವಲಿಂಗೇಗೌಡರು ನಾವು ಸಾಕಿದ ಮುದ್ದಿನ ಗಿಣಿ, ಜೆಡಿಎಸ್ ನಲ್ಲಿ ಮೇವು ಕಡಿಮೆಯಾಗಿದೆ ಅಂತ ಬೇರೆಡೆ ಮೇಯಲು ಹೋಗಿದ್ದಾರೆ. ಪಕ್ಷ ನೀಡಿದ ಎಲ್ಲ ಸವಲತ್ತುಗಳನ್ನು ಅನುಭವಿಸಿ ಚುನಾವಣೆ ಹತ್ತಿರ ಬಂದಾಗ ಜೆಡಿಎಸ್ ಗೆ ದ್ರೋಹ ಬಗೆದು ಕಾಂಗ್ರೆಸ್ ಸೇರಿದ್ದಾರೆ ಎಂದು ರೇವಣ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 08, 2023 10:57 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.