AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದಕರ ಗುಂಡಿಗೆ ಬಲಿಯಾಗಿರುವ ಶಿವಮೊಗ್ಗದ ಮಂಜುನಾಥ್ ಅವರ ತಾಯಿಗೆ ವಿಷಯವಿನ್ನೂ ಗೊತ್ತಿಲ್ಲ

ಭಯೋತ್ಪಾದಕರ ಗುಂಡಿಗೆ ಬಲಿಯಾಗಿರುವ ಶಿವಮೊಗ್ಗದ ಮಂಜುನಾಥ್ ಅವರ ತಾಯಿಗೆ ವಿಷಯವಿನ್ನೂ ಗೊತ್ತಿಲ್ಲ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 22, 2025 | 8:14 PM

Share

ಪಲ್ಲವಿ ಅವರೊಂದಿಗೆ ಮಹೇಶ್ ಹಾಗೂ ಇತರರು ಫೋನಲ್ಲಿ ಮಾತಾಡಿದ್ದಾರೆ. ಅವರು ತೀವ್ರ ಸ್ವರೂಪದ ಆಘಾತಕ್ಕೊಳಗಾಗಿದ್ದರೂ ಅಧೀರರಾಗಿಲ್ಲ, ಪತಿಯ ದೇಹವನ್ನು ತರುವ ಬಗ್ಗೆ ಮಾತಾಡಿದ್ದಾರಂತೆ. ಏತನ್ಮಧ್ಯೆ, ಮಹೇಶ್ ಮತ್ತು ಮ್ಯಾಮ್ಕೋಸ್ ಸಂಸ್ಥೆಯ ಬೇರೆ ಉದ್ಯೋಗಿಗಳು ಶಿವಮೊಗ್ಗ ಜಿಲ್ಲಾಧಿಕಾರಿ, ಸಂಸದರೊಂದಿಗೆ ಮಾತಾಡಿ ಮಂಜುನಾಥ್ ಅವರ ದೇಹವನ್ನು ತರುವ ಏರ್ಪಾಟು ಮಾಡಲು ವಿನಂತಿಸಿಕೊಂಡಿದ್ದಾರೆ. ಈಗಾಗಲೇ ಗೃಹ ಸಚಿವ ಅಮಿತ್ ಶಾ ಅವರು ಸ್ಥಳಕ್ಕೆ ಧಾವಿಸಿರುವರೆಂದು ಮಹೇಶ್ ಹೇಳಿದರು.

ಶಿವಮೊಗ್ಗ, ಏಪ್ರಿಲ್ 22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರು ನಡೆಸಿದ ಭೀಕರ ದಾಳಿಗೆ ಕನ್ನಡಿಗ ಮಂಜುನಾಥ್ (Kannadiga Manjunath) ಬಲಿಯಾಗಿದ್ದಾರೆ. ಏಪ್ರಿ;ಲ್ 19ರಂದು ಇವರು ತಮ್ಮ ಪತ್ನಿ ಪಲ್ಲವಿ ಮತ್ತು ಮಗನೊಂದಿಗೆ ಕಾಶ್ಮೀರ ಪ್ರವಾಸ ತೆರಳಿದ್ದರು ಮತ್ತು 24 ರಂದು ಶಿವಮೊಗ್ಗಗೆ ವಾಪಸ್ಸಾಗುವವರಿದ್ದರು. ಪಲ್ಲವಿ ಅವರು ಮ್ಯಾನೇಜರ್ ಆಗಿ ಕೆಲಸ ಮಾಡುವ ಕೆಲಸ ಮಾಡುವ ಮ್ಯಾಮ್ಕೋಸ್ (ಮಲ್ನಾಡ್ ಅಡಕೆ ಮಾರ್ಕೆಟಿಂಗ್ ಕೋ-ಆಪರೇಟಿವ್ ಸೊಸೈಟಿ ಲಿ.) ಸಂಸ್ಥೆಯ ಉಪಾಧ್ಯಕ್ಷರಾಗಿರುವ ಮಹೇಶ್ ಅವರು ಹೇಳುವ ಪ್ರಕಾರ ಮಂಜುನಾಥ್ ಅವರ ತಾಯಿಗೆ ಮಗ ಭಯೋತ್ಪಾದಕರ ಗುಂಡಿಗೆ ಬಲಿಯಾಗಿರುವ ಸಂಗತಿ ಇನ್ನೂ ಗೊತ್ತಿಲ್ಲ ಮತ್ತು ಹೇಳುವ ಧೈರ್ಯ ಕೂಡ ಇವರ್ಯಾರಿಗೂ ಆಗಿಲ್ಲ.

ಇದನ್ನೂ ಓದಿ:  Pahelgam Attack: ಪಹಲ್ಗಾಮ್​ನಲ್ಲಿ ದಾಳಿ ನಡೆಸಿದವರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ; ಅಮಿತ್ ಶಾ ಖಡಕ್ ಎಚ್ಚರಿಕೆ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.