AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Shivamogga: ಶಿವಮೊಗ್ಗದ ಸಂಸದ, ಶಾಸಕರಿಂದ ಪ್ರಧಾನಿಗಳಿಗೆ ಸನ್ಮಾನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಕಪ್ರೇಕ್ಷಕ!

PM Modi in Shivamogga: ಶಿವಮೊಗ್ಗದ ಸಂಸದ, ಶಾಸಕರಿಂದ ಪ್ರಧಾನಿಗಳಿಗೆ ಸನ್ಮಾನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಕಪ್ರೇಕ್ಷಕ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 27, 2023 | 1:27 PM

Share

ಶಾಸಕ ಹರತಾಳು ಹಾಲಪ್ಪನವರು ಪ್ರಧಾನಿಗಳಿಗೆ ಶ್ರೀಗಂಧದಲ್ಲಿ ತಯಾರಿಸಿದ ಶಿವಮೊಗ್ಗ ವಿಮಾನ ನಿಲ್ದಾಣದ ಪ್ರತಿಕೃತಿಯನ್ನು ಕಾಣಿಕೆಯಾಗಿ ನೀಡಿದರು. ಇದೆಲ್ಲ ನಡೆಯುತ್ತಿರಬೇಕಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಕಪ್ರೇಕ್ಷಕನಂತೆ ನಿಂತಿದ್ದರು!

ಶಿವಮೊಗ್ಗ: ನಗರದಲ್ಲಿ ನಿರ್ಮಿಸಲಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಅಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರನ್ನು ವೇದಿಕೆಯ ಮೇಲೆ ರಾಜ್ಯದ ನಾಯಕರು ಒಬ್ಬೊಬ್ಬರಾಗಿ ಸನ್ಮಾನಿಸಿದರು. ಸ್ಥಳೀಯ ಶಾಸಕ ಕೆಎಸ್ ಈಶ್ವರಪ್ಪ (KS Eshwarappa) ಪ್ರಧಾನಿಗಳಿಗೆ ಶಾಲು ಹೊದಿಸಿ ಸನ್ಮಾನಿಸಿದರೆ, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಹೂವಿನ ಹಾರ ತೊಡಿಸಿದರು. ನಂತರ ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಬಿಎಸ್ ಯಡಿಯೂರಪ್ಪನವರು (BS Yediyurappa) ವಿಶೇಷವಾಗಿ ತಯಾರಿಸಲಾದ ಪೇಟವನ್ನು ಪ್ರಧಾನಿಗಳಿಗೆ ತೊಡಿಸಿ ಗೌರವಿಸಿದರು. ಅದಾದ ಮೇಲೆ ಶಾಸಕ ಹರತಾಳು ಹಾಲಪ್ಪನವರು ಪ್ರಧಾನಿಗಳಿಗೆ ಶ್ರೀಗಂಧದಲ್ಲಿ ತಯಾರಿಸಿದ ಶಿವಮೊಗ್ಗ ವಿಮಾನ ನಿಲ್ದಾಣದ ಪ್ರತಿಕೃತಿಯನ್ನು ಕಾಣಿಕೆಯಾಗಿ ನೀಡಿದರು. ಇದೆಲ್ಲ ನಡೆಯುತ್ತಿರಬೇಕಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಕಪ್ರೇಕ್ಷಕನಂತೆ ನಿಂತಿದ್ದರು!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.