ಶಿವಮೊಗ್ಗ, ಆ.16: ಜಿಲ್ಲೆಯ ಹೊಸನಗರ ತಾಲೂಕಿನ ಪುರಮಠ ಗ್ರಾಮದ ಮನೆಯೊಂದರಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿದೆ. ಗೌರಮ್ಮ ಎಂಬ ಮಹಿಳೆಗೆ ಸೇರಿದ ಮನೆಯ ಕಾರ್ ಶೆಡ್ನಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ಕಾಳಿಂಗ ಸರ್ಪವನ್ನು ನೋಡಿ ಕುಟುಂಬಸ್ಥರು ಭಯಭೀತರಾಗಿದ್ದು ಉರಗ ತಜ್ಞ ಬೆಳ್ಳೂರು ನಾಗರಾಜ್ ಅವರನ್ನು ಸಂಪರ್ಕಿಸಿದ್ದಾರೆ. ಸ್ಥಳಕ್ಕೆ ಬಂದ ಉರಗ ತಜ್ಞ ನಾಗರಾಜ್ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸರ್ಪವನ್ನು ಕಾಡಿಗೆ ಸೇರಿಸಿದ್ದಾರೆ.