ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್

Edited By:

Updated on: Jan 27, 2026 | 5:19 PM

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿ ಸರ್ಕಾರಿ ಶಾಲೆಯ ಸುಮಾರು 59 ವಿದ್ಯಾರ್ಥಿಗಳು, ಅನಿಮಿಯಾ ತಡೆಗಟ್ಟಲು ನೀಡಿದ ಮಾತ್ರೆಗಳನ್ನು ಸೇವಿಸಿದ ನಂತರ ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದಾರೆ. ಮಾತ್ರೆ ಸೇವಿಸಿದ ಒಂದು ಗಂಟೆಯೊಳಗೆ ರಿಯಾಕ್ಷನ್ ಕಂಡುಬಂದಿದ್ದು, ಎಲ್ಲರನ್ನೂ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್, ಯಾವುದೇ ವಿದ್ಯಾರ್ಥಿಗಳಿಗೆ ಜೀವಾಪಾಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗ, ಜನವರಿ 27: ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಮಾತ್ರೆ ತಿಂದು ಅಸ್ವಸ್ಥರಾಗಿರುವಂತಹ ಘಟನೆ ನಡೆದಿದೆ. ಅನಿಮಿಯಾ ತಡೆಗಟ್ಟಲು ವಾರಕ್ಕೊಮ್ಮೆ ಖನಿಜಾಶಂದ ಮಾತ್ರೆ ನೀಡಲಾಗುತ್ತದೆ. ಇಂದು ಮಧ್ಯಾಹ್ನ ಶಾಲೆಯಲ್ಲಿ ಮಾತ್ರೆ ನೀಡಲಾಗಿತ್ತು. ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಯಲ್ಲಿ ಸುಮಾರು 59 ವಿದ್ಯಾರ್ಥಿಗಳಿಗೆ ಏಕಾಏಕಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ವಿದ್ಯಾರ್ಥಿಗಳಿಗೆ ಜೀವಾಪಾಯವಿಲ್ಲ ಎಂದು ಟಿಹೆಚ್​ಓ ಹಾಗೂ ಬಿಇಓ ನಾಗೆಂದ್ರಪ್ಪ ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jan 27, 2026 05:17 PM
Loading...
Unable to load recommendations.
Follow Us