AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ 4,500 ಕೋಟಿ ರೂ. ವಂಚನೆ ಪ್ರಕರಣ: ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದವರಿಗೂ ಶುರುವಾಯ್ತು ನಡುಕ

ಬೆಳಗಾವಿಯಲ್ಲಿ 4,500 ಕೋಟಿ ರೂ. ವಂಚನೆ ಪ್ರಕರಣ: ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದವರಿಗೂ ಶುರುವಾಯ್ತು ನಡುಕ

Sahadev Mane
| Edited By: |

Updated on: May 24, 2026 | 9:36 AM

Share

ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ್ ನಡೆಸಿದ ₹4,500 ಕೋಟಿ ಪೊಂಜಿ ವಂಚನೆ ಪ್ರಕರಣದಲ್ಲಿ 35,000 ಹೂಡಿಕೆದಾರರು ಸಂಕಷ್ಟದಲ್ಲಿದ್ದಾರೆ. ಆರಂಭಿಕ ಹೂಡಿಕೆದಾರರು ತಮ್ಮ ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದಿದ್ದು, ಸಿಐಡಿ ಈಗ ಅಂತಹವರ ಹಣವನ್ನು ವಾಪಸ್ ಪಡೆಯಲು ಮುಂದಾಗಿದೆ. ಎಲ್ಲ ಹೂಡಿಕೆದಾರರಿಗೆ ನ್ಯಾಯ ಒದಗಿಸುವುದು ಸಿಐಡಿ ಗುರಿಯಾಗಿದೆ.

ಬೆಳಗಾವಿ, ಮೇ 24: 4,500 ಕೋಟಿ ವಂಚನೆ ಪ್ರಕರಣದಲ್ಲಿ ಸಿಐಡಿ ತನಿಖೆ ಚುರುಕುಗೊಂಡಿದೆ. ಶಿವಾನಂದ ನೀಲಣ್ಣವರ್ ಮಾಲೀಕತ್ವದ ಶಿವಂ ಅಸೋಸಿಯೇಟ್ಸ್ ಸಂಸ್ಥೆಯಲ್ಲಿ ಸುಮಾರು 35,000 ಜನರು ಹೂಡಿಕೆ ಮಾಡಿದ್ದರು. ಇದೀಗ ಹಣ ಸಂದಾಯದ ಪರಿಶೀಲನೆ ನಡೆಯುತ್ತಿದ್ದು, ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದವರಿಗೂ ಆತಂಕ ಶುರುವಾಗಿದೆ. ಆರಂಭಿಕ ಹಂತದಲ್ಲಿ, ಹೂಡಿಕೆ ಮಾಡಿದ ಹಲವರು ತಮ್ಮ ಮೂಲ ಹೂಡಿಕೆಗಿಂತ ದುಪ್ಪಟ್ಟು ಲಾಭ ಪಡೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉದಾಹರಣೆಗೆ, 50 ಲಕ್ಷ ಹೂಡಿಕೆ ಮಾಡಿದವರು 1 ಕೋಟಿವರೆಗೂ ಲಾಭಾಂಶ ಪಡೆದಿದ್ದಾರೆ. ಸಿಐಡಿ ಡಿಐಜಿ ಭೀಮಶಂಕರ್ ಗುಳೆದ್ ಮಾರ್ಗದರ್ಶನದಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ ತಂಡ, ಈ ಹೆಚ್ಚಿನ ಲಾಭ ಪಡೆದ ಹೂಡಿಕೆದಾರರನ್ನು ಪತ್ತೆಹಚ್ಚಿ ಅವರಿಂದ ಹೆಚ್ಚುವರಿ ಹಣವನ್ನು ವಾಪಸ್ ಪಡೆಯುವ ಪ್ರಕ್ರಿಯೆ ಆರಂಭಿಸಿದೆ. ಇದರಿಂದ ವಂಚನೆಗೊಳಗಾದ ಉಳಿದ ಹೂಡಿಕೆದಾರರಿಗೆ ನ್ಯಾಯ ಒದಗಿಸುವುದು ಸಿಐಡಿ ಉದ್ದೇಶವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Sahadev Mane
Sahadev Mane