ಶಾಸಕ ಬಸನಗೌಡ ಯತ್ನಾಳ್ ಸವಾಲನ್ನು ಶಿವಾನಂದ ಪಾಟೀಲ್ ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಂಡಿದ್ದಾರೆ: ಸ್ಪೀಕರ್

ಅರುಣ್​ ಕುಮಾರ್​ ಬೆಳ್ಳಿ

Updated on: May 02, 2025 | 3:53 PM

ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ ಸಲ್ಲಿಸಿರುವುದೇ ಕಾನೂನುಬಾಹಿರ, ಅದು ಸಿಂಧು ಅಲ್ಲ, ಆದರೂ ನೀವು ಅದನ್ನು ಹೇಗೆ ಸ್ವೀಕರಿಸಿದಿರಿ ಅಂತ ಪತ್ರಕರ್ತರೊಬ್ಬರು ಕೇಳಿದಾಗ ಖಾದರ್, ಅವರ ರಾಜೀನಾಮೆ ಪತ್ರ ಸ್ವೀಕರಿಸಿದ್ದೇನೆ, ಅಂಗೀಕರಿಸಿದ್ದೇನೆಂದು ಹೇಳಿಲ್ಲ, ಅದು ಸಂವಿಧಾನದ ನಿಯಮಾವಳಿಗಳ ಪ್ರಕಾರ ಅಂಗೀಕರಿಸಲು ಬರುತ್ತೋ ಇಲ್ಲವೇ ಪರಿಶೀಲಿಸಬೇಕು ಎಂದರು.

ಬೆಂಗಳೂರು, ಮೇ 2 : ಸಚಿವ ಶಿವಾನಂದ ಪಾಟೀಲ್ ನೀಡಿದ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ ಬಳಿಕ ಮಾತಾಡಿದ ವಿಧಾನ ಸಭಾ ಸ್ಪೀಕರ್ ಯುಟಿ ಖಾದರ್, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಸೆದಿರುವ ಸವಾಲನ್ನು ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಂಡು ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದರು. ವೈಯಕ್ತಿಕ ವಿಚಾರಗಳನ್ನು ರಾಜಕಾರಣದಲ್ಲಿ ಬಳಸಬೇಕೋ ಇಲ್ಲವೊ ಅನ್ನೋದು ಅವರವರ ವಿವೇಚನೆ ಬಿಟ್ಟಿರುವ ವಿಚಾರ, ಎಲ್ಲವೂ ಬದಲಾಗುತ್ತಿರುವ ಹಾಗೆ ರಾಜಕಾರಣವೂ ಬದಲಾಗುತ್ತಿದೆ, ಪಾಟೀಲ್ ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಪರಿಶೀಲನೆ ಮಾಡುತ್ತೇನೆ ಎಂದು ಖಾದರ್ ಹೇಳಿದರು.

ಇದನ್ನೂ ಓದಿ:   ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ: ಶಾಸಕ ಯತ್ನಾಳ್​ಗೆ ಕೋರ್ಟ್​ನಿಂದ ನೋಟಿಸ್​

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.