‘ಶಿವಮೊಗ್ಗದ ಜನರು ಬದಲಾವಣೆ ಬಯಸಿದ್ದಾರೆ’: ಗೀತಾ ನಾಮಪತ್ರ ಸಲ್ಲಿಕೆ ಬಳಿಕ ಶಿವಣ್ಣ ಪ್ರತಿಕ್ರಿಯೆ

|

Updated on: Apr 15, 2024 | 6:06 PM

ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್​ ಅವರು ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅವರ ಪರವಾಗಿ ಶಿವರಾಜ್​ಕುಮಾರ್​ ಪ್ರಚಾರ ಮಾಡುತ್ತಿದ್ದಾರೆ. ಗೀತಾ ನಾಮಪತ್ರ ಸಲ್ಲಿಸಿದ ಬಳಿಕ ಶಿವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದ ಜನರಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್​ (Geetha Shivarajkumar) ಅವರು ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಇಂದು (ಏಪ್ರಿಲ್​ 15) ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕಾಂಗ್ರೆಸ್​ ಮುಖಂಡರಾದ ಡಿ.ಕೆ. ಶಿವಕುಮಾರ್ (DK Shivakumar)​, ಕಿಮ್ಮನೆ ರತ್ನಾಕರ್​ ಮುಂತಾದವರು ಗೀತಾಗೆ ಸಾಥ್​ ನೀಡಿದ್ದಾರೆ. ಗೀತಾ ಪರವಾಗಿ ಅವರ ಪತಿ ಶಿವರಾಜ್​ಕುಮಾರ್​ ಅವರು ಜಿಲ್ಲೆಯಾದ್ಯಂತ ಪ್ರಚಾರ ಮಾಡುತ್ತಿದ್ದಾರೆ. ಗೀತಾ ನಾಮಪತ್ರ ಸಲ್ಲಿಸಿದ ಬಳಿಕ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ‘ಶಿವಮೊಗ್ಗದ ಜನತೆಗೆ ಧನ್ಯವಾದಗಳು. ನಾಮಪತ್ರ ಸಲ್ಲಿಸುವಾಗ ಇಷ್ಟೊಂದು ಜನರು ಪ್ರೀತಿ-ವಿಶ್ವಾಸದಿಂದ ಬಂದಿರುವುದು ನೋಡಿದರೆ ಒಂದು ಬದಲಾವಣೆ ಬೇಕು ಅಂತ ಅವರೆಲ್ಲರೂ ಬಯಸಿದ್ದಾರೆ ಎಂಬುದು ಗೊತ್ತಾಗುತ್ತದೆ. ಜನರ ಮುಖದಲ್ಲಿ ನಗು ಇತ್ತು. ಅದರ ಮೂಲಕ ಬದಲಾವಣೆ ಕೇಳುತ್ತಿದ್ದಾರೆ ಎಂಬುದು ನನ್ನ ಭಾವನೆ. ನಿಮ್ಮಲ್ಲರ ಆಶೀರ್ವಾದ ಬೇಕು. ಗೀತಾ ಖಂಡಿತಾ ಗೆಲ್ಲುತ್ತಾರೆ’ ಎಂದು ಶಿವರಾಜ್​ಕುಮಾರ್​ (Shivarajkumar) ಹೇಳಿದ್ದಾರೆ. ‘ಇಂದು ನಾನು ನಾಮಪತ್ರ ಸಲ್ಲಿಸಿ ಬಂದಿದ್ದೇನೆ. ನಮ್ಮ ಪಕ್ಷದ ಡಿ.ಕೆ. ಶಿವಕುಮಾರ್​ ಅವರಿಗೆ ಧನ್ಯವಾದ ಹೇಳುತ್ತೇನೆ. ಎಲ್ಲ ಕಾರ್ಯಕರ್ತರಿಗೆ ನನ್ನ ನಮಸ್ಕಾರ. ಮತದಾರರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಅವರೆಲ್ಲರ ಆಶೀರ್ವಾದ ನಮ್ಮ ಪಕ್ಷ ಮತ್ತು ನನ್ನ ಮೇಲೆ ಇರಲಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಗೀತಾ ಶಿವರಾಜ್​ಕುಮಾರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.