ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವರಾಜ್ಕುಮಾರ್
‘ನಿರ್ದೇಶನ ಮಾಡುವುದು ಅಷ್ಟು ಸುಲಭದ ಮಾತಲ್ಲ. ಒಂದು ಕಥೆಯನ್ನು ಬಾಯಲ್ಲಿ ಹೇಳಬಹುದು. ಆದರೆ, ಅದನ್ನು ತೆರೆಮೇಲೆ ತರೋದು ಅಷ್ಟು ಸುಲಭ ಅಲ್ಲವೇ ಅಲ್ಲ’ ಎಂದರು ಶಿವಣ್ಣ.
ಶಿವರಾಜ್ಕುಮಾರ್ ಅವರು ಇಂದು (ಅಕ್ಟೋಬರ್ 22) ದುನಿಯಾ ವಿಜಯ್ ನಿರ್ದೇಶನದ ಸಲಗ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಆ ಬಳಿಕ ಅವರು ಮಾಧ್ಯಮಗಳ ಜತೆ ಮಾತನಾಡಿದ್ದಾರೆ. ಅಷ್ಟೇ ಅಲ್ಲ, ದುನಿಯಾ ವಿಜಯ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಹಾಗಾದರೆ, ಅವರು ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಏನಂದ್ರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.
‘ನಿರ್ದೇಶನ ಮಾಡುವುದು ಅಷ್ಟು ಸುಲಭದ ಮಾತಲ್ಲ. ಒಂದು ಕಥೆಯನ್ನು ಬಾಯಲ್ಲಿ ಹೇಳಬಹುದು. ಆದರೆ, ಅದನ್ನು ತೆರೆಮೇಲೆ ತರೋದು ಅಷ್ಟು ಸುಲಭ ಅಲ್ಲವೇ ಅಲ್ಲ’ ಎಂದರು ಶಿವಣ್ಣ. ಆ ಮೂಲಕ ದುನಿಯಾ ವಿಜಯ್ ಬೆನ್ನು ತಟ್ಟಿದರು.
‘ಸಲಗ’ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರರ್ದಶನ ಕಾಣುತ್ತಿದೆ. ಆದರೆ ಈ ಚಿತ್ರಕ್ಕೆ ತೊಂದರೆ ನೀಡುವ ಪ್ರಯತ್ನ ಕೂಡ ಕೆಲವರಿಂದ ಆಗುತ್ತಿದೆ. ‘ಸಲಗ’ ವಿರುದ್ಧ ಬೇರೆ ಸಿನಿಮಾ ತಂಡದವರನ್ನು ಎತ್ತಿಕಟ್ಟುವ ಪ್ರಯತ್ನವನ್ನು ಕೆಲವರು ಮಾಡುತ್ತಿದ್ದಾರೆ. ಅಂಥವರಿಗೆ ದುನಿಯಾ ವಿಜಯ್ ಖಡಕ್ ಸಂದೇಶ ರವಾನಿಸಿದ್ದರು.
ಇದನ್ನೂ ಓದಿ: ‘ಸಲಗ ಚಿತ್ರವನ್ನು ತುಳಿಯೋಕೆ ಆಗಲ್ಲ, ಸುಮ್ಮನೆ ಸಣ್ಣತನ ತೋರಿಸಬೇಡಿ’: ದುನಿಯಾ ವಿಜಯ್ ಎಚ್ಚರಿಕೆ
Bhajarangi 2 Trailer: ‘ಭಜರಂಗಿ 2’ ಟ್ರೇಲರ್ ಮೂಲಕ ಮೋಡಿ ಮಾಡಿದ ಶಿವರಾಜ್ಕುಮಾರ್; ದುಪ್ಪಟ್ಟಾಯಿತು ನಿರೀಕ್ಷೆ
Published on: Oct 22, 2021 08:46 PM
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

