‘​ನಮ್ಮ ಇಂಡಸ್ಟ್ರಿ ಪರವಾಗಿ ಸಿದ್ದಾರ್ಥ್​ಗೆ ನಾನು ಕ್ಷಮೆ ಕೇಳುತ್ತೇನೆ’; ನೇರ ಮಾತಲ್ಲಿ ಹೇಳಿದ ಶಿವಣ್ಣ

Updated on: Sep 29, 2023 | 2:57 PM

ಬಂದ್ ಪ್ರತಿಭಟನೆಯಲ್ಲಿ ಭಾಗಿಯಾದ ಶಿವಣ್ಣ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಸೆಪ್ಟೆಂಬರ್ 28ರಂದು ತಮಿಳು ನಟ ಸಿದ್ದಾರ್ಥ್ ಅವರು ಬೆಂಗಳೂರಿಗೆ ಬಂದಿದ್ದರು. ಅವರ ಸುದ್ದಿಗೋಷ್ಠಿಗೆ ಅಡ್ಡಿ ಮಾಡಲಾಯಿತು. ಇದು ಸರಿ ಅಲ್ಲ ಎಂದು ಶಿವಣ್ಣ ಹೇಳಿದ್ದಾರೆ.

ಕರ್ನಾಟಕ ಬಂದ್​ಗೆ ಚಿತ್ರರಂಗ ಬೆಂಬಲ ನೀಡಿದೆ. ಬೆಂಗಳೂರಿನ ಫಿಲಂ ಚೇಂಬರ್ ಬಳಿ ಇರುವ ಗುರುರಾಜ್ ಕಲ್ಯಾಣ ಮಂಟಪದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಇಲ್ಲಿಗೆ ತೆರಳಿದ ಶಿವಣ್ಣ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಸೆಪ್ಟೆಂಬರ್ 28ರಂದು ತಮಿಳು ನಟ ಸಿದ್ದಾರ್ಥ್ (Siddharth) ಅವರು ಬೆಂಗಳೂರಿಗೆ ಬಂದಿದ್ದರು. ಅವರ ಸುದ್ದಿಗೋಷ್ಠಿಗೆ ಅಡ್ಡಿ ಮಾಡಲಾಯಿತು. ಇದು ಸರಿ ಅಲ್ಲ ಎಂದು ಶಿವಣ್ಣ ಹೇಳಿದ್ದಾರೆ. ‘ಸಿದ್ದಾರ್ಥ್ ಸುದ್ದಿಗೋಷ್ಠಿಗೆ ಅಡ್ಡಿ ಮಾಡಲಾಯಿತು. ಇದು ಸರಿ ಅಲ್ಲ. ನಮ್ಮ ಇಂಡಸ್ಟ್ರಿ ಪರವಾಗಿ ಸಿದ್ದಾರ್ಥ್​ಗೆ ನಾನು ಕ್ಷಮೆ ಕೇಳುತ್ತೇನೆ’ ಎಂದರು. ‘ಇನ್ನುಮುಂದೆ ಈ ರೀತಿ ಆಗಲ್ಲ’ ಎಂದು ಅವರು ಭರವಸೆ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More